NEWSಕೃಷಿನಮ್ಮರಾಜ್ಯರಾಜಕೀಯ

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

 ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ,  ರಾಷ್ಟ್ರೀಕೃತ ಬ್ಯಾಂಕುಗಳಿಂದ ನೀಡಲಾದ ಸಾಲದ ಕುರಿತಾಗಿ ಜಿಲ್ಲಾವಾರು ಮಾಹಿತಿ ಪಡೆದು ಸಾಲಮನ್ನಾ ಮಾಡಲು ಸರ್ಕಾರ ಕ್ರವಹಿಸಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ  ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಎಚ್.ಎಂ. ರೇವಣ್ಣ (ವಿಧಾನ ಸಭೆಯಿಂದ ಚುನಾಯಿತರಾದವರು)  ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿಗೆ ಸರ್ಕಾರದಿಂದ ನೇಕಾರರ ಸಾಲದ ಮೇಲೆ 227.86 ಲಕ್ಷ ರೂ.ಗಳ ಬಡ್ಡಿ ಮನ್ನಾ ಮಾಡಲಾಗಿದೆ. 9765 ಫಲಾನುಭವಿಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಅನುಕೂಲವಾಗಿದೆ ಎಂದು   ತಿಳಿಸಿದರು.

ಜವಳಿ ಉದ್ಯಮವನ್ನು ಉತ್ತೇಜಿಸುವ ಸಂಬಂಧ ಬೇರೆ ಬೇರೆ ರಾಜ್ಯಗಳು ರೂಪಿಸಿಕೊಂಡಿರುವ ಜವಳಿ ನೀತಿಯನ್ನು ಅಧ್ಯಯನ ಮಾಡಿ  ಹೊಸ ಟೆಕ್ಸ್‍ಟೈಲ್ ಪಾಲಿಸಿ ಜಾರಿಗೆ ತರಲಾಗುವುದು. ಜವಳಿ ಉದ್ಯಮವನ್ನು ಉತ್ತೇಜಿಸುವ ಸಲುವಾಗಿ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪನೆ ಮಾಡಲು ಕ್ರಮ ವಹಿಸಲಾಗುವುದು. ಜವಳಿ ಉದ್ಯಮದ ಮೇಲೆ ಹೂಡಿಕೆ ಮಾಡಿದ ಬಂಡವಾಳದ ಮೇಲೆ ಶೇಕಡ 30 ರಷ್ಟು ಸಹಾಯಧನ ನೀಡಲು ಕ್ರಮವಹಿಸಲಾಗುವುದು ಅಲ್ಲದೆ ನೇಕಾರರಿಗೆ ಪ್ರತಿ ತಿಂಗಳು ಒಂದು ಸಾವಿರದಂತೆ 5ವರ್ಷ ನೀಡಲು ಚಿಂತಿಸಲಾಗಿದೆ ಎಂದು  ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...