NEWSನಮ್ಮರಾಜ್ಯ

ಕೊರೊನಾಗೂ ಚಿಕನ್ ಸೇವನೆಗು ಸಂಬಂಧವಿಲ್ಲ

ಮಾಂಸಹಾರಿಗಳಿಗೆ ಅನಗತ್ಯ ಭಯ ಬೇಡ ಎಂದ ಸಚಿವ ಸಿ.ಟಿ.ರವಿ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಮಾಂಸಹಾರಿಗಳು ಅನಗತ್ಯವಾಗಿ ಭಯ ಪಡದೇ ಚಿಕನ್ ಸೇವಿಸಬಹುದಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ತಿಳಿಸಿದರು.

ಇಂದು ನಗರದ ಕೆ.ಎಂ. ಮುಖ್ಯ ರಸ್ತೆಯಲ್ಲಿರುವ ಲೈಫ್‌ಲೈನ್ಸ್ ಟೆಂಡರ್ ಚಿಕನ್ ಸೆಂಟರ್‌ಗೆ ಭೇಟಿ ನೀಡಿ ಚಿಕನ್ ಖರೀದಿಸಿ ಮಾತನಾಡಿದರು.

ಕೊರೋನಾ ಸೋಂಕಿಗೂ ಚಿಕನ್‌ಗೂ ಯಾವುದೇ ಸಂಬಂಧವಿಲ್ಲ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮೀನು, ಮೊಟ್ಟೆ, ಮಾಂಸವನ್ನು ಸೇವಿಸಬಹುದಾಗಿದೆ ಎಂದು ಆಹಾರ ತಜ್ಞರು ದೃಢ ಪಡಿಸಿದ್ದಾರೆ ಎಂದರು.

ಕೊರೋನಾ ಸೋಂಕಿನ ಹಿನ್ನೆಲೆ ಚಿಕನ್ ಸೇವನೆ ಬಗ್ಗೆ ಮಾಂಸ ಪ್ರಿಯರಿಗೆ ಭಯವಿದ್ದು, ಚಿಕನ್ ದೇಹಕ್ಕೆ ಪ್ರೋಟಿನ್ ಅಂಶ ನೀಡುವುದರ ಜೊತೆಗೆ ದೇಹಕ್ಕೆ ಬೇಕಾಗಿರುವ ರೋಗನಿರೋಧಕ ಶಕ್ತಿ ಒದಗಿಸುತ್ತದೆ ಎಂದು ಆಹಾರ ತಜ್ಞರು ದೃಢ ಪಡಿಸಿರುವುದರಿಂದ ಮಾಂಸ ಸೇವನೆ ಮಾಡುವವರು ಯಾವುದೇ ಅಂಜಿಕೆ ಇಲ್ಲದೆ ಕೋಳಿ ಮಾಂಸ ಸೇವಿಸಬಹುದಾಗಿದೆ ಎಂದರು.

ಮಾಂಸ ಮಾರಾಟದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಮೂಲಕ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದ ಅವರು ಆರೋಗ್ಯಕ್ಕೆ ಬೇಕಾದ ಪೌಷ್ಟಿಕ ಅಂಶಗಳನ್ನು ಒದಗಿಸುವ ಚಿಕನ್, ಮೊಟ್ಟೆ ಮೀನುಗಳನ್ನು ಭಯವಿಲ್ಲದೆ ಉಪಯೋಗಿಸಬಹುದಾಗಿದೆ ಎಂದರು.

ನಗರಸಭೆ ಮಾಜಿ ಸದಸ್ಯ ಟಿ. ರಾಜಶೇಖರ್, ಲೈಫ್‌ಲೈನ್ಸ್ ಫೀಡ್ಸ್‌ನ ವ್ಯವಸ್ಥಾಪಕ ಕಿಶೋರ್ ಕುಮಾರ್ ಹೆಗ್ಡೆ, ಮಧುಕರ್ ಪ್ರಭು, ಭಗವತಿ ಕೃಷ್ಣ, ಜನರಲ್ ಮ್ಯಾನೆಜರ್ ಮುರಾರಿ, ಶರತ್ ಕುಮಾರ್ ಸೇರಿದಂತೆ ಮತ್ತಿತರರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ