NEWSವಿದೇಶ

ಕೊರೊನಾಗೆ ಆರನೇ ಬಲಿ

ಗದಗದ ವೃದ್ದೇಯನ್ನು ಬಲಿಪಡೆದ ವಿಶ್ವಮಾರಿ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಾಮಾರಿ ಕೊರೊನಾಗೆ ಇಂದು ಮತ್ತೊಂದು ಬಲಿಯಾಗಿದ್ದು, ಈ  ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೇರಿಕೆಯಾಗಿದೆ.

ಗದಗದ 80 ವರ್ಷದ ವೃದ್ಧೆಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು ವಿಶ್ವಮಾರಿ ರಾಜ್ಯದ ಜನರಲ್ಲಿ ಭಯವನ್ನು ಹೆಚ್ಚುಮಾಡುತ್ತಿದೆ.

ಮಂಗಳವಾರವಷ್ಟೇ ಈ ವೃದ್ಧೆ ಸೇರಿದಂತೆ  12 ಜನರಿಗೆ ಸೋಂಕು ತಗುಲಿತ್ತು. ಈ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿರಿ ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಬಲಿ

ವೃದ್ಧೆ ಸಾವನ್ನಪ್ಪಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಮತ್ತು ಕುಟುಂಬದವರನ್ನು ರಾತ್ರೋರಾತ್ರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಎಲ್ಲಾ ರೀತಿಯ ಪರೀಕ್ಷೆಗೂ ಒಳಪಡಿಸಲಾಗುತ್ತಿದೆ.

ಇದನ್ನೂ ಓದರಿ ಕರ್ನಾಟಕದಲ್ಲಿ ಇಂದು  ಮತ್ತೆ 12 ಮಂದಿಯಲ್ಲಿ ಕೊರೊನಾ ಪಾಸಿಟಿವ್‌

ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗ ಸೂಚಿ ರೀತ್ಯ ಅತ್ಯಕ್ರಿಯೆ

ತೀವ್ರ  ಉಸಿರಾಟ ತೊಂದರೆಯಿಂದ ಗದಗ ಜಿಮ್ಸ್‌ ಆಸ್ಪತ್ರೆಗೆ ಏ.4 ರಂದು 80 ರ ವಯೋವೃದ್ಧೆ ದಾಖಲಾಗಿದ್ದರು,  ಏ..6 ರಂದು ಅವರಿಗೆ ಕೊವಿಡ್-19 ಸೊಂಕು ಇದೆಯಂದು ( ಪಿ.166) ದೃಢಪಟ್ಟಿತ್ತು. ಇಂದು ಮುಂಜಾನೆ 12.55 ಗಂಟೆಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಯಲ್ಲಿದ್ದ ವೃದ್ಧೆ ಹೃದಯಾಘಾತದಿಂದ (ಕಾರ್ಡಿಯಾಕ್ ಅರೆಸ್ಟ) ಮೃತಪಟ್ಟಿದ್ದಾರೆ. ಮೃತರ ಸಂಸ್ಕಾರ ಕೊವಿಡ್-19 ವಿಪತ್ತು ನಿರ್ವಹಣೆ ಮಾರ್ಗ ಸೂಚಿ ರೀತ್ಯ ನಡೆಯಲಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ