NEWSಶಿಕ್ಷಣ-

ಕೊರೊನಾ ಜಾಗೃತಿಗೆ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಕೋವಿಡ್-19 (ಕೊರೊನಾ ವೈರಸ್) ಕಾಯಿಲೆಯು ಸಾಂಕ್ರಾಮಿಕ ರೋಗವಾಗಿದ್ದು, ಇದು ಹರಡದಂತೆ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಜ್ಜುಗೊಂಡಿದೆ.

ಸಾರ್ವಜನಿಕ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ಸಮಿತಿಯನ್ನು ರಚನೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಸ್.ಎ.ಅಶ್ರಫುಲ್ ಹಸನ್  ಆದೇಶಿಸಿದ್ದಾರೆ.

ಗ್ರಾಮ ಮಟ್ಟದ ಕಾರ್ಯಪಡೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷರಾಗಿರುತ್ತಾರೆ.  ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಬೀಟ್ ಪೊಲೀಸ್, ಗ್ರಾಮದ ಆರೋಗ್ಯ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನೋಂದಾಯಿತ ಸ್ಥಳೀಯ ವೈದ್ಯರು ಸದಸ್ಯರಾಗಿರುತ್ತಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಕಾರ್ಯಪಡೆಯ ಜವಾಬ್ದಾರಿಗಳು 

65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರ ಸಮೀಕ್ಷೆಯನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ನಿಯಮಿತವಾಗಿ ಅವರ ಆರೋಗ್ಯವನ್ನು ಗಮನಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರನ್ನು ಮಹಿಳಾ ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿಯಮಿತವಾಗಿ ಭೇಟಿ ನೀಡಿ ಇವರುಗಳ ಆರೋಗ್ಯ ಮೇಲ್ವಿಚಾರಣೆ ಮಾಡಬೇಕು. ಕೆಮ್ಮು, ನೆಗಡಿ, ತಲೆನೋವು, ಜ್ವರ, ಗಂಟಲಲ್ಲಿ ಉರಿತ ಲಕ್ಷಣಗಳು ಕಾಣಿಸುವಂತಹ ಜನರನ್ನು ತಕ್ಷಣ ಗುರುತಿಸಿ ಸಮೀಪದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಕೊರೊನಾ ಬಾಧಿತ ವಿದೇಶದಿಂದ ಬರುವ ಭಾರತೀಯರನ್ನು ಗುರುತಿಸಿ ಅವರನ್ನು ತಪಾಸಣೆಗೆ ಒಳಪಡಿಸಬೇಕು ಮತ್ತು ಅಂತಹ ಗುರುತಿಸಿದವರನ್ನು 14 ದಿನಗಳವರೆಗೆ ಪ್ರತ್ಯೇಕವಾದ ಕೊಠಡಿಗಳಲ್ಲಿ ಇರಿಸಿ ಹೊರಗೆ ಬಾರದಂತೆ ನೋಡಿಕೊಂಡು ಚಿಕಿತ್ಸೆ ನೀಡಬೇಕು.  ಸಾರ್ವಜನಿಕರೊಂದಿಗೆ ಬೆರೆಯದಂತೆ ನೋಡಿಕೊಳ್ಳಬೇಕು ಸೂಚಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಮದುವೆ ಜಾತ್ರೆ, ಮೆರವಣಿಗೆ, ಸಂತೆ ಹಾಗೂ ಗುಂಪು ಚಟುವಟಿಕೆಗಳನ್ನು ಗ್ರಾಮೀಣ ಕಾರ್ಯಪಡೆ ನಿಯಂತ್ರಿಸಬೇಕು. ಸ್ವಚ್ಛತಾಗಾರರು ಮತ್ತು ಘನತ್ಯಾಜ್ಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಮಾಸ್ಕ್, ಗ್ಲೌಸ್ ಮತ್ತು ಬೂಟ್ಸ್‍ಗಳನ್ನು ಒದಗಿಸಬೇಕು. ಕೊರೊನಾ ವೈರಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ