ಸಂಸ್ಕೃತಿ

ಕೊರೊನಾ ಭೀತಿಗೆ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಬಂದ್‌

ವಿಜಯಪಥ ಸಮಗ್ರ ಸುದ್ದಿ

ಬೇಲೂರು: ಇಡಿ ಜಗತ್ತನ್ನೆ ಬೆಚ್ಚಿಬೀಳಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 900 ವರ್ಷಗಳ ಇತಿಹಾಸವಿರುವ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಬಾಗಿಲನ್ನು ಮಂಗಳವಾರ (ಮಾ.17)ದಿಂದ ಮಾ.31ರ ವರೆಗೆ ಮುಚ್ಚಲಾಗಿದೆ.

ಕೇಂದ್ರ ಸರಕಾರದ ಆದೇಶದಂತೆ ಕೇಂದ್ರಪುರಾತತ್ವ ಇಲಾಖೆ ಅಧಿಕಾರಿಗಳು ದೇಗುಲದ ದ್ವಾರಗೋಪುರದ ಬಾಗಿಲನ್ನು ಮುಚ್ಚಿದರು. ಬೆಳಗ್ಗೆ ಅರ್ಚಕರು ದೇಗುಲಕ್ಕೆ ಆಗಮಿಸುವ ವೇಳೆಗೆ ಬಾಗಿಲು ಮುಚ್ಚಲ್ಪಟ್ಟಿತ್ತಾದರೂ ಪೂಜಾಕಾರ್ಯ ನಿಮಿತ್ತ ನಂತರ ಭಾಗಶಃ ತೆರೆಯಲಾಯಿತು. ಅರ್ಚಕರು ಎಂದಿನಂತೆ ದೇವರಿಗೆ ಪೂಜೆ ಸಲ್ಲಿಸಿದರು. ಆದರೆ ಪ್ರವಾಸಿಗರಿಗೆ, ಭಕ್ತರಿಗೆ ಪ್ರವೇಶ ನೀಡಲಿಲ್ಲ. ಇದರಿಂದ ದೂರದೂರಿನಿಂದ ಆಗಮಿಸಿದ್ದ ಭಕ್ತರು ನಿರಾಸೆಗೊಂಡರು. ಭಕ್ತರು, ದ್ವಾರಗೋಪುರದ ಬಾಗಿಲ ಬಳಿಯಿರುವ ಬಲಿಪೀಠದ ಮೇಲೆ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ದೇಗುಲ ನಿರ್ಮಾಣದ ನಂತರ ಈವರಗೆ ದ್ವಾರಗೋಪುರದ ಬಾಗಿಲನ್ನು ಮುಚ್ಚಿರಲಿಲ್ಲ. ಹಲವು ವರ್ಷಗಳ ಹಿಂದೆ ಸಾಮೂಹಿಕವಾಗಿ ಪ್ಲೇಗ್, ಕಾಲರ ರೋಗ ಬಂದಿದ್ದ ಸಮಯದಲ್ಲೂ ಸಹ ದೇಗುಲದ ಬಾಗಿಲನ್ನು ಮುಚ್ಚಿರಲಿಲ್ಲ. ಇದೀಗ ಇದು ಅನಿವಾರ್ಯ ಎನ್ನಲಾಗಿದೆ. ದೇಗುಲದ ಬಾಗಿಲು ಇದೇ ಮಾರ್ಚ್‌ 31ರವರೆಗೆ ಮುಚ್ಚಲಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ