NEWSದೇಶ-ವಿದೇಶ

ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಎಂದ ಪ್ರಧಾನಿ

ಲಾಕ್‌ಡೌನ್‌ ಬಳಿಕ ಎರಡನೇ ಮನ್‌ ಕೀ ಬಾತ್ l ವಿಶ್ವಕ್ಕೆ ಮಾದರಿಯಾದ ಭಾರತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಮ್ಮ ದೇಶ ಬಹಳ ಧೈರ್ಯದಿಂದ ಹೋರಾಡುವ ಮೂಲಕ ವಿಶ್ವಕ್ಕೂ ಸಹಕಾರ ನೀಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಭಾನುವಾರ ಆಯೋಜಿಸಿದ್ದ 2ನೇ ಮನ್‌ ಕೀ ಬಾತ್‌ನಲ್ಲಿ ಮಾತನಾಡಿದ ಅವರು, ವೈದ್ಯರು, ಪೊಲೀಸ್‌ ಸೇರಿದಂತೆ ಕೊರೊನಾ ವಾರಿಯರ್ಸ್‌ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಅವರಿಗೆ ನಾವು ಗೌರವ ಸಲ್ಲಿಸಲೇ ಬೇಕು. ಅವರ ಕಾಯಕವನ್ನು ಜನ ಮತ್ತು ಜಗವೂ ಮೆಚ್ಚುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸುವು ದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ನಮ್ಮ ದೇಶ ವಿಶ್ವಕ್ಕೆ ಕೊರೊನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯಲ್ಲೂ ಸ್ಪಂದಿಸುತ್ತಿದೆ. ವೈದ್ಯರು ಮತ್ತು ವೈದ್ಯ ಪರಿಕರಗಳ ಜತೆಗೆ ಬೇಕಾದ ತಾತ್ಕಾಲಿಕ ಔಷಧಗಳನ್ನು ಸರಬರಾಜು ಮಾಡುತ್ತಿದೆ ಎಂದು ಹೇಳಿದರು.

ಭಾರತ ಕೊರೊನಾ ವಿರುದ್ಧ ಹೋರಾಡುತ್ತಿರುವುದಕ್ಕೆ ಮತ್ತು ವಿಶ್ವಕ್ಕೆ ಬೇಕಾದ ಔಷಧ ಸರಬರಾಜು ಮಾಡುತ್ತಿರವುದಕ್ಕೆ ವಿಶ್ವದ ಹಲವು ರಾಷ್ಟ್ರಗಳು ಗೌರವ ಸಲ್ಲಿಸುತ್ತಿವೆ. ಅಲ್ಲದೇ ದೇಶದಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳನ್ನು ಸ್ವಾಗತಿಸುವ ಮೂಲಕ ಹೊಗಳುತ್ತಿವೆ. ಅದೇ ರೀತಿ ದೇಶ ವಾಸಿಗಳು ಗೌರವಯುತವಾಗಿ ನಡೆದುಕೊಂಡಿರುವುದಕ್ಕೆ ತುಂಬ ಹೆಮ್ಮೆಯಿದೆ ಎಂದರು.

ಇನ್ನು ಇಂದು ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದು, ಎಲ್ಲರೂ ಬಸವಣ್ಣನವರ ತತ್ವಾದರ್ಶ ಪಾಲಿಸಕಬೇಕು. ಅಲ್ಲದೆ ವಿಶ್ವಗುರುವಿನ ವಚನಗಳನ್ನು ಪಠಿಸುವ ಮೂಲಕ ಜಾತಿ ಮೇಲು ಕೀಳೆಂಬ ಭಾವನೆಯಿಂದ ಹೊರಬಂದು ನಾವು ಭಾರತೀಯರು ಎಂದು ಒಗ್ಗಟ್ಟಿನಿಂದ ದೇಶವನ್ನು ಮುನ್ನಡೆಸೋಣ ಎಂದು ಕರೆ ನೀಡಿದರು.

ನಮ್ಮ ಪಾರಂಪರಿಕ ಸಿದ್ಧಾಂತವನ್ನು ಪಾಲಿಸೋಣ, ಆಯುರ್ವೇದವನ್ನು ಕಡೆಗಣಿಸುವುದು ಸರಿಯಲ್ಲ. ನಾವು ಕಡೆಗಣಿಸಿದ್ದನ್ನು ವಿಶ್ವ ಅಂಗಿಕರಿಸುತ್ತಿದೆ. ನಮ್ಮ ಸಂಸ್ಕೃತಿಯನ್ನು ಮೊದಲು ನಾವು ಪಾಲಿಸಲು ಮರೆಯದಿರೋಣ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು  ಕೊರೊನಾ ವಿರುದ್ಧ ಸಮರ ಸಾರೋಣ ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ