NEWSದೇಶ-ವಿದೇಶಸಿನಿಪಥ

ಕೊರೊನಾ ವಿರುದ್ಧದ ಸಮರಕ್ಕೆ ಹರಿದು ಬರುತ್ತಿದೆ ದೇಣಿಗೆ

ಈಗಾಗಲೇ ಪರಿಹಾರ ನಿಧಿಗೆ ಹರಿದು ಬಂತು 2.5 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ವೈರಸ್‌ ಬಾಧೆಯಿಂದ ತತ್ತರಿಸುತ್ತಿರುವ ಜನರು ಸೇರಿದಂತೆ ದೇಶದಲ್ಲಿ ಹಸಿವನ್ನು ತಣಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ದೇಣಿಗೆ ನೀಡುವ ಮನವಿಗೆ ಈಗಾಗಲೇ ಹಲವರು ಮುಂದಾಗಿ ತಮ್ಮ ಉದಾರ ಮನಸ್ಸಿನಿಂದ ದಾನ ಮಾಡಿದ್ದಾರೆ. ಮಾಡುತ್ತಲೂ ಇದ್ದಾರೆ.

ಅವರಲ್ಲಿ ಜೆಮ್‌ಶಟ್‌ಜಿ ರತನ್‌ಟಾಟಾ, ಹಿಂದಿ, ಕನ್ನಡ, ತೆಲುಗು ತಮಿಳು ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾ ತಾರೆಯರು ದೇಣಿಗೆ ನೀಡಿದ್ದಾರೆ. ಅವರಲ್ಲಿ ನಮ್ಮ ಸ್ಯಾಂಡಲ್‌ವುಡ್‌ ತಾರೆಯರಾದ ಪುನೀತ್‌ ರಾಜ್‌ಕುಮಾರ್‌, ಡಾ.ಶಿವರಾಜ್‌ಕುಮಾರ್‌, ನಿಖಿಲ್‌ ಕುಮಾರಸ್ವಾಮಿ ಹೀಗೆ ಪಟ್ಟಿ ಬೆಳೆಯುತ್ತದೆ.

ಅದರಂತೆ ಸಾಮಾಜಿಕ ದತ್ತಿಗೆ ಹೆಸರಾಗಿರುವ ವಿಪ್ರೋ ಸಮೂಹ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಷನ್ ವತಿಯಿಂದ ಕೊರೋನಾ ವಿರುದ್ಧದ ಸಮರಕ್ಕೆ ಸಾವಿರ ಕೋಟಿ ರೂ. ನೆರವು ನೀಡಲಾಗುತ್ತಿದೆ.

ಇಂದು ದೇಶ ಅತ್ಯಂತ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿದ್ದು ಅದನ್ನು ಹೋಗಲಾಡಿಸಲು ಎಲ್ಲರೂ ಸಹಕಾರ ಮನೋಭಾವಬನೆ ತಾಳಬೇಕು.  ಹೀಗಾಗಿ  ಫೌಂಡೇಷನ್‌ನಿಂದ 1125 ಕೋಟಿ ರೂ.ಗಳನ್ನು ಕೊರೋನಾ ವಿರುದ್ಧದ ಹೋರಾಟಕ್ಕೆ ಮಿಸಲಿಡುವುದಾಗಿ ಕಂಪನಿಯ ಮುಖ್ಯಸ್ಥರು ತಿಳಿಸಿದ್ದಾರೆ.

ದೇಶದಲ್ಲೇ ಅತಿದೊಡ್ಡ ಉದ್ದಿಮೆಗಳಾದ ಟಾಟಾ 1.5 ಸಾವಿರ ಕೋಟಿ ರೂ., ರಿಲಯನ್ಸ್ 500 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿವೆ. ಇದರ ಬೆನ್ನಲ್ಲಿಯೇ ವಿಪ್ರೋ ಸಹ ತನ್ನ ಸಾಮಾಜಿಕ ಕಳಕಳಿ ಮೆರೆದಿರುವುದು ಶ್ಲಾಘನೀಯವೇ ಆದರೆ ಇವರು ಸೇರಿದಂತೆ ಲಕ್ಷಾಂತರ ಜನರು ನೀಡುವ ದೇಣಿಗೆ ನಿಜವಾಗಿರುವ ನೊಂದವರ ಕಣ್ಣೀರು ನೀಗಿಸುವಂತಾದರೆ ಅದು ಸಾರ್ಥಕತೆ ಪಡೆಯುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂಬುವುದು ದೇಶದ ಸಮಸ್ತೆ ಪ್ರಜೆಗಳ ಮನವಿಯಾಗಿದೆ.

ಅಂದಹಾಗೆ ಮೂರು ದಿನದ ಹಿಂದೆ ತೆರೆಯಲಾದ ವಿಶೇಷ ದೇಣಿಗೆ ಸಂಗ್ರಹದ ಪ್ರಧಾನಮಂತ್ರಿ ನಿಧಿಗೆ ಈಗಾಗಲೇ 2.5 ಸಾವಿರ ಕೋಟಿಗೂ ಹೆಚ್ಚು ಹಣ ಹರಿದು ಬಂದಿದೆ.

ಇನ್ನು ರಾಜ್ಯದಲ್ಲೂ ಅಪಾರ ಪ್ರಮಾಣದ ದೇಣಿಗೆ ಸಂಗ್ರಹವಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ತಮ್ಮ ಒಂದು ವರ್ಷದ ಪೂರ್ಣವೇತನವನ್ನು ದೇಣಿಗೆಯಾಗಿ ನೀಡುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ