NEWSದೇಶ-ವಿದೇಶ

ಕೊರೊನಾ ವೈರಸ್‌ ಜೀನೋಮ್‌ ಸೀಕ್ವೇನ್ಸ್‌ ಡಿಕೋಡ್‌ !?

ಗುಜರಾತ್‌ ವಿಜ್ಞಾನಿಗಳ ಸಾಧನೆಗೆ ಗುಜರಾತ್ ಸಿಎಂ ಕಚೇರಿ ಟ್ವೀಟ್ ಮೂಲಕ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್: ಕೊರೊನಾ ವೈರಸ್ ಗೆ ಮದ್ದು ಕಂಡುಹಿಡಿಯುವ ನಿಟ್ಟಿನಲ್ಲಿ ಗುಜರಾತ್‌ ವಿಜ್ಞಾನಿಗಳು ಕೋವಿಡ್-19 ಗೆ ಕಾರಣವಾಗಿರುವ ವೈರಾಣುವಿನ ಜೀನೋಮ್ ಸೀಕ್ವೆನ್ಸ್ ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಎಂ ಕಚೇರಿ ಶ್ಲಾಘಿಸಿದೆ.

ಗುಜರಾತ್ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ವಿಜ್ಞಾನಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅದರ ಬಗ್ಗೆ ವಿವರನ್ನು ನೀಡಲಾಗಿದೆ.

ಜೀನೋಮ್‌ ಎಂದರೆ ವಂಶವಾಹಿಗಳ ಗುಚ್ಛ. ಇದು ವೈರಾಣುಗಳ ನಿರ್ದಿಷ್ಟ ಗುಣಲಕ್ಷಣಗಳನ್ನು ನಿರ್ಧರಿಸುತ್ತದೆ. ಜೀನೋಮ್ ಸೀಕ್ವೆನ್ಸ್ ಅಥವಾ  ವಂಶವಾಹಿಳ ಗುಚ್ಛದ ಅನುಕ್ರಮವನ್ನು ಡಿಕೋಡ್ ಮಾಡುವುದರಿಂದ ವೈರಾಣುವಿನ ಮೂಲವನ್ನು ತಿಳಿದು ಸೂಕ್ತ ಚಿಕಿತ್ಸಾ ವಿಧಾನಕ್ಕೆ ಸಹಕಾರಿಯಾಗಲಿದೆ.

ಆ ನಿಟ್ಟಿನಲ್ಲಿ ಸಂಶೋಧನೆ ಆರಂಭಿಸಿದ್ದು, ಮೊದಲ ಬಾರಿಗೆ ಭಾರತದಲ್ಲಿ ಗುಜರಾತ್‌ನ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರ (ಜಿಬಿಆರ್‌ಸಿ)ದ ವಿಜ್ಞಾನಿಗಳು ಜೀನೋಮ್ ಸೀಕ್ವೆನ್ಸ್ ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.

ಜೀನೋಮ್ ಸೀಕ್ವೆನ್ಸ್ ವೈರಸ್‌ನ ಮೂಲ, ಔಷಧಗಳ ಟಾರ್ಗೆಟ್ ಹಾಗೂ ಚುಚ್ಚುಮದ್ದುಗಳನ್ನು ನೀಡುವುದರಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವಿಟರ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದೆ.

ಈಗಾಗಲೇ ಐಸಿಎಂಆರ್ ನಲ್ಲಿನ ಸಂಶೋಧಕರು ಭಾರತದಲ್ಲಿರುವ ಎರಡು ಬಾವಲಿ ಪ್ರಬೇಧಗಳಲ್ಲಿ ಕೊರೋನಾ ವೈರಸ್ ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಳನ್ನು ಹರಡುವ ಸಾಮರ್ಥ್ಯವಿರುವ ಹೊಸ ಪ್ರಬೇಧಗಳನ್ನು ತಿಳಿಯಲು ಬಾವಲಿಗಳ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ.

ಗುಜರಾತ್‌ ವಿಜ್ಞಾನಿಗಳು ಮಾಡಿರುವ ಪ್ರಯೋಗ ಯಶಸ್ವಿಯಾದರೆ ಇಡೀ ವಿಶ್ವಕ್ಕೆ ಭಾರತ ಗುರುವಾಗುವುದರಲ್ಲೊಇ ಯಾಗುದೇ ಸಂಶಯವಿಲ್ಲ ಎಂದು ಈಗಾಲೇ ನಾಗರಿಕರು ಮೆಚ್ಚುಗೆ ಮಾತನಾಡುತ್ತಿದ್ದಾರೆ.

 

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ