NEWSಆರೋಗ್ಯ

ಕೊರೊನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು

ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಜಾಥಾಗೆ ಸಚಿವ ಶ್ರೀರಾಮುಲು ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಕೊರೊನಾ ವೈರಸ್ ಕುರಿತು ಆಟೋ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವ ಜಾಗೃತಿ ಜಾಥಾಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಬಿ.ಶ್ರೀರಾಮುಲು ಚಾಲನೆ ನೀಡಿದರು.

ನೋವೆಲ್  ಕೊರೊನಾ ವೈರಸ್ ಸಮುದಾಯದಲ್ಲಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ  ನಗರದ ಜಿಲ್ಲಾಸ್ಪತ್ರೆ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಜಾಥಾಗೆ ಚಾಲನೆ ನೀಡಿ  ಮಾತನಾಡಿದ ಸಚಿವರು,  ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ತಗೆದುಕೊಂಡಲ್ಲಿ ಸುರಕ್ಷಿತವಾಗಿರಬಹುದು ಎಂದು ತಿಳಿಸಿದರು.

ಪ್ರಧಾನಮಂತ್ರಿಗಳು ಈಗಾಗಲೇ 21 ದಿನಗಳ ಕಾಲ ದೇಶದ್ಯಾಂತ ಲಾಕ್‍ಡೌನ್ ಮಾಡಿದ್ದು, ಸರ್ಕಾರದ ಆದೇಶದಂತೆ ಸಾರ್ವಜನಿಕರು ಪಾಲಿಸಬೇಕು. ಅನಾವಶ್ಯಕವಾಗಿ ಹೊರಗಡೆ ತಿರುಗಾಡುವುದಾಗಲಿ ಮಾಡಬಾರದು ಎಂದರು.

ಆಟೋ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದ ಅವರು, ಈಗಿನ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಆಟೋ ಮೂಲಕ ಕರೋನಾ ವೈರಸ್ ಕುರಿತು ಜಾಗೃತಿ ನೀಡುವ ಸಂದೇಶಗಳನ್ನು ಸಾರ್ವಜನಿಕರು ಪಾಲಿಸಬೇಕು. ಯಾರದರಾದರೂ ವಿದೇಶಿಯಿಂದ ಬಂದ ವ್ಯಕ್ತಿಗಳ ಇದ್ದಲ್ಲಿ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದರು.

ಯಾರಿಗಾದರೂ ಕೆಮ್ಮು, ಜ್ವರ, ಸೀತ, ನೆಗಡಿ ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ಸೋಂಕು ಹರಡುವುದನ್ನು ತಡೆಯಲು ಮಾಸ್ಕ್‌ ಬಳಸಿ ಹಾಗೂ ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುತ್ತೀರಿ ಎಂದರು.

ಶಾಸಕ ಸೋಮಶೇಖರೆಡ್ಡಿ, ಗ್ರಾಮೀಣ ಶಾಸಕ ನಾಗೇಂದ್ರ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ.ಬಿ.ಕೆ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಹಕ ಆರ್.ಎನ್.ಶಿವರಾಜ್  ಇತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ