NEWSನಮ್ಮಜಿಲ್ಲೆ

ಕೊರೊನಾ ಸೋಂಕಿನಿಂದ ಮುಕ್ತಿಪಡೆಯುತ್ತಿದೆ ಅರಮನೆ ನಗರಿ ಮೈಸೂರು

90ಮಂದಿ ಸೋಂಕಿತರಲ್ಲಿ 79ಜನರು ಗುಣಮುಖ l ಇನ್ನು 11ಮಂದಿಯಷ್ಟೇ ಚಿಕಿತ್ಸೆಯ ಸಾಲಿನಲ್ಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕಿತರಿಂದ ತತ್ತರಿಸಿ ಹೋಗಿದ್ದ ಅರಮನೆಗಳ ನಗರಿ ಸದ್ಯ ವಾರದಿಂದ ನಿರಾಳವಾಗಿದ್ದು ಈ ಹಿನ್ನೆಲೆಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಕೆಂಪು ವಲಯದಿಂದ ಕಿತ್ತಳೆ ವಲಯದತ್ತ ಮುಖ ಮಾಡುವ ಎಲ್ಲಾ ಲಕ್ಷಣಗಳು ನಿಚ್ಚಳವಾಗಿವೆ.

ನಂಜನಗೂಡು ತಾಲೂಕು ಜ್ಯುಬಿಲಿಯಂಟ್‌ ಕಾರ್ಖಾನೆ ಮತ್ತು ತಬ್ಲಿಘಿ ಜಮಾತ್‌ ಪ್ರಕರಣಗಳಿಂದ ಆರಂಭದಲ್ಲಿ ಕೊರೊನಾ ಹಾಟ್‌ಸ್ಪಾಟ್‌ ಆಗಿದ್ದ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೇವಲ 2 ಪ್ರಕರಣಗಳು ಮಾತ್ರ ವರದಿಯಾಗಿವೆ. ಈ ವರೆಗೆ 90 ಮಂದಿ ಸೋಂಕಿತರಲ್ಲಿ 79 ಮಂದಿ ಗುಣಮುಖರಾಗಿದ್ದು, 11 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯವಾಗಿ ಕೊರೊನಾ ಸೋಂಕಿನೊಂದಿಗೆ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ವ್ಯಕ್ತಿ ಗುಣಮುಖರಾಗಿರುವುದು, ಜಿಲ್ಲೆಯಲ್ಲಿ ಸೋಂಕಿನ ವಿರುದ್ಧ ಹೋರಾಡುವ ಶಕ್ತಿ ವೃದ್ಧಿಸಿದೆ.  ಇದು ಯಾವುದೇ ಪ್ರಾಣಾಪಾಯವಿಲ್ಲದೆ ಸೋಂಕಿತರೆಲ್ಲರೂ ಗುಣಮುಖರಾಗುತ್ತಿದ್ದಾರೆ. ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಉಳಿದ ಸಕ್ರಿಯ ಸೋಂಕಿತರು ವೈರಸ್‌ನಿಂದ ಮುಕ್ತಿಗೊಂಡು ಹೊರಬರಲಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಕೇವಲ 93 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 4,762 ಜನರ ಮೇಲೆ ನಿಗಾ ವಹಿಸಲಾಗಿದ್ದು ಅದರಲ್ಲಿ 4,658 ಮಂದಿ 14 ದಿನಗಳ ಐಸೊಲೇಷನ್‌ ಮುಗಿಸಿದ್ದಾರೆ. ಇವರಲ್ಲಿ 3,623 ಮಂದಿಗೆ ಮಾದರಿ ಪರೀಕ್ಷೆ ನಡೆಸಲಾಗಿದೆ. ಇನ್ನು 93 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದು ಅವರಿಗೆ ಮಾದರಿ ಪರೀಕ್ಷೆ ನಡೆಸಬೇಕಾಗಿದೆ.

ನಂಜಿನಿಂದ ಮುಕ್ತಗೊಳ್ಳುತ್ತಿದೆ ನಂಜನಗೂಡು
ಇನ್ನು ನಂಜನಗೂಡಿನಲ್ಲಿ ಸಂಭವಿಸಿದ್ದ ಕೊರೊನಾ ಸ್ಫೋಟಕ್ಕೆ ನಲುಗಿದ್ದ ಜನರು ಸದ್ಯ ನಿಟ್ಟುಸಿರು ಬಿಟ್ಟಿದ್ದು, ಜ್ಯುಬಿಲಿಯಂಟ್‌ ಕಾರ್ಖಾನೆಯ ಸೋಂಕಿನಿಂದ ಸಾವಿರಕ್ಕೂ ಹೆಚ್ಚು ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದವರು, ಎಲ್ಲರೂ 14 ದಿನಗಳ ಅವಧಿ ಮುಗಿಸಿದ್ದು, ಸೋಂಕಿನ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ  ಎಲ್ಲರೂ ನಿರಾಳರಾಗಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಪಟ್ಟಣದ ಕೆಲವು ಬಡಾವಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

ಸದ್ಯ ಮೈಸೂರು ಜಿಲ್ಲೆಯಲ್ಲಿ ವಾರದಿಂದೀಚೆಗೆ ಸೋಂಕಿತರ ಪ್ರಕರಣದಲ್ಲಿ ಇಳಿಮುಖಕಂಡುಬರುತ್ತಿದ್ದು ಜಿಲ್ಲಾಡಳಿತ ಸೇರಿದಂತೆ ಎಲ್ಲರೂ ನಿರಾಳರಾಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ