NEWSನಮ್ಮಜಿಲ್ಲೆ

 ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಿ

ಚಿಕ್ಕಮಗಳೂರು ಅಧಿಕಾರಿಗಳಿಗೆ ಸಚಿವ ಸಿ.ಟಿ. ರವಿ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕೊರೊನಾ ಸೋಂಕಿನಿಂದ ವಿಶ್ವವೇ ತತ್ತರಿಸಿದ್ದು, ನಮ್ಮ ಜಿಲ್ಲೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಹರಡದಂತೆ ಕ್ರಮಗಳನ್ನು ಕೈಗೊಂಡಿದ್ದು, ಆಶಾ ಕಾರ್ಯಕರ್ತೆಯರು, ತಹಸೀಲ್ದಾರ್‌ರರು ಹಾಗೂ ಆರೋಗ್ಯ ಅಧಿಕಾರಿಗಳನ್ನೊಳಗೊಂಡ ಅನೇಕ ಸಭೆಗಳನ್ನು ನಡೆಸಲಾಗಿದ್ದು,  ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ 87 ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು, ೩ ಜನರಲ್ಲಿ ರೋಗದ ಲಕ್ಷಣಗಳು ಕಾಣಿಸಿದ್ದು ಅವು ಕೂಡ ನಕಾರತ್ಮಕ (ನೆಗೆಟಿವ್) ಎಂದು ದೃಢಪಟ್ಟಿವೆ. ಜಿಲ್ಲೆಯಲ್ಲಿ ಒಟ್ಟು 1177 ಎನ್-95 ಮಾಸ್ಕ್‌ಗಳಿದ್ದು, ಚಿಕ್ಕಮಗಳೂರು ತಾಲ್ಲೂಕಿನಲ್ಲಿ 351 ಎನ್-19 ಮಾಸ್ಕ್‌ಗಳಿವೆ ಹಾಗೂ ತ್ರಿಬಲ್ ಎ ಒಟ್ಟು 17520ಮಾಸ್ಕ್‌ಗಳು, ಜಿಲ್ಲೆಯಲ್ಲಿ ಒಟ್ಟು 17030 ಹ್ಯಾಂಡ್‌ಗ್ಲೌಸ್ ಮತ್ತು ತಾಲೂಕಿನಲ್ಲಿ ಖಾಸಗಿ ಹಾಗೂ ಜಿಲ್ಲಾಸ್ಪತ್ರೆಯನ್ನು ಒಳಗೊಂಡಂತೆ ಒಟ್ಟು 12 ವೆಂಟಿಲೇಟರ್‌ಗಳು ಇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 247 ಜನರು ಗೃಹ ನಿರ್ಬಂಧನದಲ್ಲಿದ್ದು, ಚಿಕ್ಕಮಗಳೂರು ತಾಲ್ಲೂಕಿನಲ್ಲಿ 87 ಜನರನ್ನು  ಗೃಹ ನಿರ್ಬಂಧನದಲ್ಲಿ ಇರಿಸಿ ಅಂತವರ ಮೇಲೆ ಹೆಚ್ಚಾಗಿ ನಿಗಾ ವಹಿಸಿ ಕೈಗೆ ಮುದ್ರೆ ಹಾಕಿ ಅವರ ಮನೆಗಳ ಮೇಲೆ ನೋಟಿಸ್‌ಗಳನ್ನು ಅಂಟಿಸಲಾಗಿದ್ದು ಬೇರೆ ಯಾರ ಜೊತೆ ಸಂಪರ್ಕದಲ್ಲಿ ಇರದಂತೆ ಎಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 60 ಕ್ಕೂ ಹೆಚ್ಚು ನಿರ್ಗತಿಕರಿದ್ದು ಚಿಕ್ಕಮಗಳೂರು ತಾಲೂಕಿನಲ್ಲಿ 34 ಜನರಿದ್ದಾರೆ. ಅವರಿಗೆ ನಗರದ ಎಐಟಿ ಬಳಿ ಇರುವ ಬಿ.ಸಿ.ಎಂ ಹಾಸ್ಟೆಲ್‌ನ ಒಂದು ಕೊಠಡಿಯಲ್ಲಿ ಇರಿಸಿ ಎನ್.ಜಿ.ಓ ಗಳ ಮುಖಾಂತರ ಊಟದ ವ್ಯವಸ್ಥೆಯ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರಿಗೂ ಅಗತ್ಯವಾಗಿ ಆರೋಗ್ಯ ಚಿಕಿತ್ಸೆ ಮಾಡುವುದಾಗಿ ಹಾಗೂ ಅಲೇಮಾರಿಗಳು ಇದ್ದಲ್ಲಿ ಅವರಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒದಗಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು526 ನ್ಯಾಯಬೆಲೆ ಅಂಗಡಿಗಳಿದ್ದು, 2 ತಿಂಗಳ ಪಡಿತರವನ್ನು  ಒಟ್ಟಿಗೆ ನೀಡುವಂತೆ ಆಹಾರ ಮತ್ತು ಸರಬರಾಜು ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು ಹಾಗೂ ಪಡಿತರ ನೀಡುವಾಗ ಮುನ್ನೆಚ್ಚರಿಕಾ ಕ್ರಮವಾಗಿ ಬೆರಳಚ್ಚು ನೀಡುವಾಗ ಮತ್ತು ನೀಡಿದ ನಂತರದಲ್ಲಿ ಸ್ಯಾನಿಟೈಸರ್‌ಗಳನ್ನು ಬಳಸಿ, ಸಾರ್ವಜನಿಕರು ಅಂತರವನ್ನು ಕಾಯ್ದಿರಿಸುವಂತೆ  ಎಚ್ಚರ ವಹಿಸಿ ಎಂದರು.

ಜನದಟ್ಟಣೆ ಆಗದಂತೆ ನೋಡಿಕೊಳ್ಳಲು ಟೋಕನ್ ನೀಡಿ ಪಡಿತರವನ್ನು ವಿತರಿಸಬೇಕು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಾರ್ಚ್ 31 ರವರೆಗೆ ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳ ಮನೆಗಳಿಗೆ ಹೋಗಿ ಆಹಾರ ಧಾನ್ಯವನ್ನು ನೀಡಲಿದ್ದಾರೆ ಎಂದರು.

ಗ್ರಾಮೀಣ ಪ್ರದೇಶದ ದಿನಸಿ ಅಂಗಡಿ ಮಾಲೀಕರು ನಗರ ಹಾಗೂ ಪಟ್ಟಣದಿಂದ ದಿನಸಿಯನ್ನು ತೆಗೆದುಕೊಂಡು ಹೋಗುವುದಕ್ಕೆ ಯಾವುದೇ ನಿರ್ಬಂಧವಿಲ್ಲ, ಲಗೇಜ್ ವಾಹನಗಳಲ್ಲೇ ದಿನಸಿ ತೆಗೆದುಕೊಂಡು ಹೋಗಬಹುದು ಎಂದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...