ದೇಶ-ವಿದೇಶ

ಕೊರೋನಾ ವೈರಸ್ ತಡೆಗಟ್ಟಲು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ: ತಹಸೀಲ್ದಾರ್‌ ವೆಂಕಟೇಶಯ್ಯ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕೊರೋನಾ ವೈರಸ್ (ಕೋವಿಡ್-19) ಸೋಂಕು ಹರಡದಂತೆ ತಡೆಗಟ್ಟಲು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಸ್ವಚ್ಛತೆ ಕುರಿತು ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸುವಂತೆ ತಹಸೀಲ್ದಾರ್ ವೆಂಕಟೇಶಯ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ಸೋಂಕು ತಡೆ ಕುರಿತು ಬುಧವಾರ ಏರ್ಪಡಿಸಿದ ಮುಂಜಾಗ್ರತಾ ಕ್ರಮಗಳ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಕೊರೋನಾ ವೈರಸ್ ಸೋಂಕು ಹರಡದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಅಲ್ಲದೆ ಇತರೆ ರೋಗಗಳು ಹರಡದಂತೆ ತಡೆಗಟ್ಟಲು ಒಳಚರಂಡಿ ಸ್ವಚ್ಛತೆ,  ಔಷಧಿ ಸಿಂಪಡಣೆ ಮಾಡಬೇಕು.  ಕೊಳಚೆ ಪ್ರದೇಶಗಳಲ್ಲಿ ಸೊಳ್ಳೆಗಳು ಹೆಚ್ಚಾಗಿರುವುದರಿಂದ ಪ್ರತಿನಿತ್ಯವೂ ಸ್ವಚ್ಛಗೊಳಿಸಿ  ಕೈಗೊಂಡ ಕ್ರಮಗಳ ಕುರಿತು ನಿತ್ಯವೂ ವರದಿ ಸಲ್ಲಿಸಬೇಕು.  ವಿದೇಶದಿಂದ ಯಾರಾದರೂ ತಾಲೂಕಿನ ವಿವಿಧ ಗ್ರಾಮಗಳಿಗೆ ಬಂದಿರುವ ಜನರ ಬಗ್ಗೆ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪ್ರತಿದಿನವೂ ವರದಿ ಮಾಡಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು. ಗ್ರಾಮಮಟ್ಟದಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಕಂದಾಯ ನಿರೀಕ್ಷಕರು ತಂಡ ರಚಿಸಲಾಗಿದ್ದು, ತಂಡವು ನಿತ್ಯವೂ ವರದಿ ನೀಡಬೇಕು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ.ಗಿರೀಶ್ ಮಾತನಾಡಿ, ಕೊರೋನಾ ವೈರಸ್ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅವಶ್ಯಕತೆ ಇಲ್ಲ. ನೆಗಡಿ, ಕೆಮ್ಮ, ಜ್ವರದಿಂದ ಬಳಲುತ್ತಿರುವವರು ಮಾತ್ರ ಮಾಸ್ಕ್ ಧರಿಸಬಹುದು ಎಂದು ಹೇಳಿದರು.

ಕೊರೋನಾ ಶಂಕಿತ ಪ್ರಕರಣಗಳು ಪತ್ತೆಯಾದಲ್ಲಿ ರಾಜ್ಯದ ಬೆಂಗಳೂರು, ಶಿವಮೊಗ್ಗ, ಹಾಸನ, ಮೈಸೂರು ಸೇರಿದಂತೆ ಐದು ಭಾಗಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ.  ಜಿಲ್ಲೆಯಲ್ಲಿ ಕೊರೋನ ವೈರಸ್ ಲಕ್ಷಣ ಕಂಡುಬಂದರೆ ಅಂತವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆಯ ಐಸೊಲೆಶನ್ ವಾರ್ಡ್, ಬಸವೇಶ್ವರ ಆಸ್ಪತ್ರೆಯಲ್ಲಿ 15 ಬೆಡ್‍ನ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಡಾ. ಭಾಗ್ಯಶ್ರೀ, ತಾಪಂ ಇಒ ಕೃಷ್ಣನಾಯ್ಕ್, ನಗರಸಭೆ ಪೌರಯುಕ್ತ ಜೆ.ಟಿ. ಹನುಮಂತರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್ ಮಂಜುನಾಥ್, ಬಸವೇಶ್ವರ ವೈದ್ಯಕೀಯ ಕಾಲೇಜ್‍ನ ಸಿಬ್ಬಂದಿಗಳು, ಸಮುದಾಯ ಔಷಧ ವಿಭಾಗದವರು,  ಪಿಡಿಒ ಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ