NEWSನಮ್ಮಜಿಲ್ಲೆ

ಕೊವೀಡ್-19: ಪ್ರತಿಬಂಧ ಉದ್ದೇಶ ಸಫಲತೆಗೆ ನಾಕಾಬಂದಿ

ಅಧಿಕಾರಿಗಳು ಜಿಲ್ಲೆಯ ರಕ್ಷಾ ಕವಚವಾಗಿ l ಸಚಿವ ಸಿ.ಸಿ.ಪಾಟೀಲ್‌ ಕರೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊವೀಡ್-19 ಸೋಂಕು ತಡೆಗೆ ಜಿಲ್ಲೆಯ ಲಾಕ್‌ಡೌನ್‌ ಜತೆಗೆ ಜಿಲ್ಲೆಗೆ ಹೊರಗಿನಿಂದ ಸೋಂಕು ಬರದಂತೆ ತಡೆಯಲು ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ ಅಧಿಕಾರಿ ಸಿಬ್ಬಂದಿ ಜಿಲ್ಲೆಯ ಜನರ ರಕ್ಷಾ ಕವಚದಂತೆ ತಮಗೆ ವಹಿಸಿರುವ ತಪಸಾಣಾ ಮತ್ತು ನಿಯಂತ್ರಣ ಕಾರ್ಯಗಳನ್ನು ಯಾವುದೇ ದಾಕ್ಷಿಣ್ಯವಿಲ್ಲದೇ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ  ಸಿ ಸಿ ಪಾಟೀಲ್‌ ಕರೆ ನೀಡಿದರು..

ಜಿಲ್ಲೆಯ  ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಕೊವಿಡ್-19 ನಿಯಂತ್ರಣದ ಅಂಗವಾಗಿ ಸ್ಥಾಪಿತ ಕೊಣ್ಣೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಅವರು ಕಾರ್ಯ ಚಟುವಟಿಕೆಯನ್ನು  ಪರಿಶೀಲಿಸಿದರು.

ಕೊವಿಡ್-19 ವಿರುದ್ಧದ ಹೋರಾಟದಲ್ಲಿ ನಮ್ಮ ಜಿಲ್ಲೆಗೆ ಪ್ರವೇಶಿಸುವ ಪ್ರತಿ ವ್ಯಕ್ತಿಯ ಮತ್ತು ವಾಹನದ ತಪಾಸಣೆ ಕಟ್ಟು ನಿಟ್ಟಾಗಿ ನಡೆಸಬೇಕು. ಸಂಶಯ ಪ್ರಕರಣವಿದ್ದಲ್ಲಿ ತಕ್ಷಣ ಸಂಬಂಧಿತ  ಅಧಿಕಾರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆ ಇಲ್ಲದಿದ್ದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದರು.

ಈಗ ಸಾರ್ವಜನಿಕ ಆರೋಗ್ಯದ ವಿಪ್ಪತ್ತಿನ ಸಂದರ್ಭವಿದ್ದು ಒಂದೇ ಒಂದು ತಪ್ಪು ವೀಪರಿತ ಪರಿಣಾಮಕ್ಕೆ ಕಾರಣವಾಗಲಿದೆ.  ಆದುದರಿಂದ ಜಿಲ್ಲೆಯ ಎಲ್ಲ  ಗಡಿ ಚೆಕ್‌ಪೋಸ್ಟ್‌ ಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದು ಅತ್ಯವಶಕ ಎಂದು ತಿಳಿಸಿದ್ದಾರೆ.

ಗದಗ ಬಾಗಲಕೋಟೆಯ ಚೆಕ್‌ಪೋಸ್ಟ್‌ ನಲ್ಲಿ  ನಿರತ ಸಿಬ್ಬಂದಿಗಳಿಗೆ ಮಜ್ಜಿಗೆಯ ವಿತರಿಸಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...