Please assign a menu to the primary menu location under menu

NEWSನಮ್ಮಜಿಲ್ಲೆ

ಕೊವೀಡ್-19: ಪ್ರತಿಬಂಧ ಉದ್ದೇಶ ಸಫಲತೆಗೆ ನಾಕಾಬಂದಿ

ಅಧಿಕಾರಿಗಳು ಜಿಲ್ಲೆಯ ರಕ್ಷಾ ಕವಚವಾಗಿ l ಸಚಿವ ಸಿ.ಸಿ.ಪಾಟೀಲ್‌ ಕರೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊವೀಡ್-19 ಸೋಂಕು ತಡೆಗೆ ಜಿಲ್ಲೆಯ ಲಾಕ್‌ಡೌನ್‌ ಜತೆಗೆ ಜಿಲ್ಲೆಗೆ ಹೊರಗಿನಿಂದ ಸೋಂಕು ಬರದಂತೆ ತಡೆಯಲು ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ ಅಧಿಕಾರಿ ಸಿಬ್ಬಂದಿ ಜಿಲ್ಲೆಯ ಜನರ ರಕ್ಷಾ ಕವಚದಂತೆ ತಮಗೆ ವಹಿಸಿರುವ ತಪಸಾಣಾ ಮತ್ತು ನಿಯಂತ್ರಣ ಕಾರ್ಯಗಳನ್ನು ಯಾವುದೇ ದಾಕ್ಷಿಣ್ಯವಿಲ್ಲದೇ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ  ಸಿ ಸಿ ಪಾಟೀಲ್‌ ಕರೆ ನೀಡಿದರು..

ಜಿಲ್ಲೆಯ  ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಕೊವಿಡ್-19 ನಿಯಂತ್ರಣದ ಅಂಗವಾಗಿ ಸ್ಥಾಪಿತ ಕೊಣ್ಣೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಅವರು ಕಾರ್ಯ ಚಟುವಟಿಕೆಯನ್ನು  ಪರಿಶೀಲಿಸಿದರು.

ಕೊವಿಡ್-19 ವಿರುದ್ಧದ ಹೋರಾಟದಲ್ಲಿ ನಮ್ಮ ಜಿಲ್ಲೆಗೆ ಪ್ರವೇಶಿಸುವ ಪ್ರತಿ ವ್ಯಕ್ತಿಯ ಮತ್ತು ವಾಹನದ ತಪಾಸಣೆ ಕಟ್ಟು ನಿಟ್ಟಾಗಿ ನಡೆಸಬೇಕು. ಸಂಶಯ ಪ್ರಕರಣವಿದ್ದಲ್ಲಿ ತಕ್ಷಣ ಸಂಬಂಧಿತ  ಅಧಿಕಾರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆ ಇಲ್ಲದಿದ್ದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದರು.

ಈಗ ಸಾರ್ವಜನಿಕ ಆರೋಗ್ಯದ ವಿಪ್ಪತ್ತಿನ ಸಂದರ್ಭವಿದ್ದು ಒಂದೇ ಒಂದು ತಪ್ಪು ವೀಪರಿತ ಪರಿಣಾಮಕ್ಕೆ ಕಾರಣವಾಗಲಿದೆ.  ಆದುದರಿಂದ ಜಿಲ್ಲೆಯ ಎಲ್ಲ  ಗಡಿ ಚೆಕ್‌ಪೋಸ್ಟ್‌ ಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದು ಅತ್ಯವಶಕ ಎಂದು ತಿಳಿಸಿದ್ದಾರೆ.

ಗದಗ ಬಾಗಲಕೋಟೆಯ ಚೆಕ್‌ಪೋಸ್ಟ್‌ ನಲ್ಲಿ  ನಿರತ ಸಿಬ್ಬಂದಿಗಳಿಗೆ ಮಜ್ಜಿಗೆಯ ವಿತರಿಸಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ