NEWSನಮ್ಮಜಿಲ್ಲೆ

ಕೋವಿಡ್ -19 ಪರಿಹಾರ ನಿಧಿ: ಆನ್ ಲೈನ್‌ನಲ್ಲೇ ದೇಣಿಗೆ ನೀಡಿ

ಸಾರ್ವಜನಿಕರಲ್ಲಿ ಧಾರವಾಡ  ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆ ಅರ್ಪಿಸಲು ಬಯಸುವ ಸಾರ್ವಜನಿಕರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡದೇ,  ತಮ್ಮ  ಆರೋಗ್ಯದ ಹಿತದೃಷ್ಟಿಯಿಂದ ಆನ್ ಲೈನ್   ಮೂಲಕವೇ  ಉದಾರ ನೆರವು ನೀಡಬಹುದು. ಇದಕ್ಕಾಗಿ ಮನೆಗಳಿಂದ ಹೊರಬರುವುದು ಬೇಡ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರವನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ರೋಗವನ್ನು ಪತ್ತೆ ಹಚ್ಚಲು ಹುಬ್ಬಳ್ಳಿಯ ಕಿಮ್ಸ್ ನಲ್ಲಿಯೂ  ಪ್ರಯೋಗಾಲಯ ಸ್ಥಾಪಿಸಲು  ಸರ್ಕಾರ ಕ್ರಮ ಕೈಗೊಂಡಿದೆ. ಸೋಂಕು ಹರಡದಂತೆ ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಬೇಕು. ಮತ್ತು ಸರ್ಕಾರ ನೀಡುವ ಪ್ರತಿಯೊಂದು ಸೂಚನೆಗಳನ್ನು ಪಾಲಿಸಬೇಕು ಎಂದರು.

ಕೋವಿಡ್ – 19 ಕೊರೊನಾ ಸೋಂಕು  ರೋಗವನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಯುದ್ಧೋಪಾದಿಯಲ್ಲಿ  ಕ್ರಮ ಕೈಗೊಳ್ಳುತ್ತಿದೆ. ಈ ಕಾರ್ಯಕ್ಕೆ ದೇಣಿಗೆ ಸಲ್ಲಿಸಲು ಬಯಸುವವರು ಸಾಧ್ಯವಾದಷ್ಟು  ಚೆಕ್ ಅಥವಾ ಡಿಡಿ ರೂಪದಲ್ಲಿ ನೀಡದೇ, ಮುಖ್ಯಮಂತ್ರಿಯವರ  ಪರಿಹಾರ ನಿಧಿ ಕೋವಿಡ್ -19 ಎಸ್.ಬಿ.ಐ.  (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ)  ವಿಧಾನ ಸೌಧ ಶಾಖೆಯ ಖಾತೆ ಸಂಖ್ಯೆ 39234923151, ಐ.ಎಫ್.ಸಿ. ಕೋಡ್ SBIN0040277ಮತ್ತು MIRCಸಂಖ್ಯೆ 560002419 ಸಂಖ್ಯೆಗೆ ಆನ್ ಲೈನ್ ನಲ್ಲಿ ಇ-ಪೇಮೆಂಟ್ ಮೂಲಕ ಸಂದಾಯ ಮಾಡಿ, ಅದರ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ [email protected] ಇಮೇಲ್ ವಿಳಾಸಕ್ಕೆ, ಮಾಹಿತಿ ಮತ್ತು ಪಾಸ್ ಪೋರ್ಟ್ ಭಾವಚಿತ್ರ ಕಳಿಸಿದರೆ ಅವುಗಳನ್ನು ಮಾಧ್ಯಮಗಳಲ್ಲಿ ಪ್ರಕಟಣೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ಕಾಗಿ ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ,  ಆರೋಗ್ಯ ಸಂರಕ್ಷಣೆಗೆ ಒತ್ತು ನೀಡಬೇಕು  ಎಂದು ಕೋರಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್