ಆರೋಗ್ಯನಮ್ಮಜಿಲ್ಲೆ

ಕೋವಿಡ್-19 ಹತೋಟಿಗೆ ಬಿಬಿಎಂಪಿ ಹರಸಾಹಸ

ಬೆಂಗಳೂರು ಶುಚಿತ್ವಕ್ಕೆ ಸೋಂಕು ನಿವಾರಕ ಔಷಧ ಸಿಂಪಡಣೆ l ತರಕಾರಿ ಮಾರಾಟಕ್ಕೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಕೊರೊನಾ ವೈರೆಸ್ ಸೋಂಕು ಮತ್ತು ಸಾಂಕ್ರಾಮಿಕ ರೋಗಗಳು ಹರಡದಂತೆ ಪಾಲಿಕೆಯು ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಪಾಲಿಕೆ ಎಲ್ಲಾ ವಾರ್ಡ್ಗಳಲ್ಲಿ ಜಟ್ಟಿಂಗ್ ಯಂತ್ರ, ಅಗ್ನಿಶಾಮಕ ವಾಹನ ಹಾಗೂ ದ್ವಿಚಕ್ರ ವಾಹನ, ಟ್ರ್ಯಾಕ್ಟರ್‌ಗಳಲ್ಲಿ ಡ್ರಮ್‌ಗಳನ್ನಿಟ್ಟು, ಟ್ಯಾಂಕರ್, ಡ್ರೋನ್ ಹಾಗೂ ಸಿಬ್ಬಂದಿ ಸಹಯೋಗದಲ್ಲಿ ಸೋಂಕು ಸಿವಾರಕ ಸಿಂಪಡಣೆ ಮಾಡಲಾಗುತ್ತಿದೆ. ಸೋಂಕು ನಿವಾರಕ ಸಿಂಪಡಿಸಲು ಹೊಸದಾಗಿ 400 ಪವರ್ ಸ್ಪ್ರೇಯರ್ ಯಂತ್ರ ಹಾಗೂ 19 ಮಿಸ್ ಬ್ಲೋವರ್ ಯಂತ್ರಗಳನ್ನು ಕರೀದಿಸಲು ಕ್ರಮವಹಸಿಲಾಗಿದೆ. ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಪಾಗಿಂಗ್ ಕೂಡಾ ಮಾಡಲಾಗುತ್ತಿದೆ.

ನಗರಾದ್ಯಂತ ಸ್ವಚ್ಛತಾ ಕಾರ್ಯ

ನಗರದ ಪ್ರಮುಖ ರಸ್ತೆಗಳನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಕಸ ಗುಡಿಸುವ ಯಂತ್ರಗಳ ಮೂಲಕ ಶುಚಿತ್ವ ಕಾಪಾಡಲಾಗುತ್ತಿದೆ. ಕೆ.ಆರ್.ಮಾರುಕಟ್ಟೆ ಪ್ರದೇಶದಲ್ಲಿದ್ದ ಸಂಪೂರ್ಣ ಕಸ, ಕಟ್ಟಡ ತ್ಯಾಜ್ಯವನ್ನು ತೆರವುಗಳಿಸಲಾಗಿದೆ. ಮಾರುಕಟ್ಟೆ ಬಳಿಯ ಮೇಲ್ಸೇತುವೆ ಕೆಳಭಾಗದಲ್ಲಿದ್ದ ತ್ಯಾಜ್ಯವನ್ನೆಲ್ಲಾ ತೆರವುಮಾಡಿ ಬ್ಲೀಚಿಂಗ್ ಪುಡಿ ಹಾಕಿ ಸ್ವಚ್ಛಗೊಳಿಸಲಾಗಿದೆ.

ಸೇವಾ ಕೇಂದ್ರ ಹಾಗೂ ನಿರಾಶ್ರಿತರಿಗೆ ಆಶ್ರಯ

ನಾಗರಿಕರಿಗೆ ಅಗತ್ಯ ಸೇವೆಗಳನ್ನು ಕಲ್ಪಿಸುವ ಉದ್ದೇಶದಿಂದ ಹಾಗೂ ಕೊರೊನಾ ವೈರೆಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದೆ. ಪಾಲಿಕೆ ನಡೆಸುತ್ತಿರುವ 9 ನಿರಾಶ್ರಿತ ಕೇಂದ್ರಗ(ಪಶ್ಚಿಮ ವಲಯ – ಗೂಡ್ ಶೆಡ್ ರಸ್ತೆಯಲ್ಲಿ 2 ಕೇಂದ್ರ, ರಾಜಾಜಿನಗರದ ರಾಮಮಂದಿರ ಬಳಿ ಹಾಗೂ ಉಪ್ಪಾರ ಪೇಟೆ ಬಳಿ,  ಪೂರ್ವ ವಲಯ – ಮರ್ಫಿಟೌನ್ ಮಾರುಕಟ್ಟೆ ಬಳಿ, ಮಹದೇವಪುರ ವಲಯ – ಊಡಿ ಬಳಿ, ಯಲಹಂಕ ವಲಯ – ಬಾಗಲೂರು ಬಳಿ, ಬೊಮ್ಮನಹಳ್ಳಿ ವಲಯ – ಜಂಬೂ ಸವಾರಿ ದಿಣ್ಣೆ ಬಳಿ, ದಾಸರಹಳ್ಳಿ ವಲಯ – ತುಮಕೂರು ಮುಖ್ಯರಸ್ತೆ) ಳಲ್ಲಿ 380 ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಡಲಾಗಿದ್ದು, ಆರೋಗ್ಯ ತಪಾಸಣೆ ಕೂಡ ನಡೆಸಲಾಗುತ್ತಿದೆ.

ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೊಟ್ಟಣ ಪೂರೈಕೆ

ಜೀವನೋಪಾಯಕ್ಕಾಗಿ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಹಾಗೂ ಬಡವರ್ಗದ ಜನರಿಗೆ 91 ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಊಟದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ.

ಮೈದಾನಗಳಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ

ವ್ಯಕ್ತಿ ವ್ಯಕ್ತಿಗಳ ನಡುವೆ ಕನಿಷ್ಟ ಅಂತರ(1 ಮೀಟರ್) ಕಾಯ್ದುಕೊಳ್ಳಬೇಕಿರುವುದರಿಂದ, ತಾತ್ಕಾಲಿಕವಾಗಿ ಮಾರುಕಟ್ಟೆಗಳಲ್ಲಿ ತರಕಾರಿ ಮಾರಾಟ ಮಾಡದೆ.

ಮೈದಾನಗಳಲ್ಲಿ ತರಕಾರಿ ಮಾರಾಟ ಮಾಡಲು ಕ್ರಮವಹಿಸಲಾಗುತ್ತಿದ್ದು, ಈಗಾಗಲೇ ವಲಯವಾರು ಮೈದಾನಗಳನ್ನು ಗುರುತಿಸಲಾಗಿದೆ. ಅದರಂತೆ, ದಕ್ಷಿಣ ವಲಯದಲ್ಲಿ ಕಲಾಸಿಪಾಳ್ಯ ಮಾರುಕಟ್ಟೆಯನ್ನು ನ್ಯಾಷನಲ್ ಆಟದ ಮೈದಾನಕ್ಕೆ, ಸಾರಕ್ಕಿ ಮಾರುಕಟ್ಟೆಯನ್ನು ಜರಗನಹಳ್ಳಿ ಮೈದಾನಕ್ಕೆ, ಪೂರ್ವ ವಲಯದಲ್ಲಿ ಪುಲಕೇಶಿ ನಗರದಲ್ಲಿ ಎರಡು ಮೈದಾನಗಳನ್ನು ಗುರುತಿಸಲಾಗಿದೆ.

ಪಶ್ಚಿಮ ವಲಯದಲ್ಲಿ ಸ್ವಾಮಿ ವಿವೇಕಾನಂದ ಮೈದಾನಗಳಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಮೈದಾನಗಳಲ್ಲಿ ವ್ಯಕ್ತಿ-ವ್ಯಕ್ತಿ ನಡುವೆ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಮಾರ್ಕಿಂಗ್ ಮಾಡಲಾಗುತ್ತಿದೆ. ಅಲ್ಲದೆ ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಮೈದಾನಗಳಲ್ಲಿ ತರಕಾರಿ ಮಾರಾಟ ಪ್ರಾರಂಭವಾಗಲಿದೆ. ಇದಲ್ಲದೆ ದಿನಸಿ ಮಾರಾಟ ಮಾಡುವ ಮಳಿಗೆಗಳಲ್ಲೂ ಮಾರ್ಕಿಂಗ್ ಮಾಡಿ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿರುತ್ತದೆ.

ಫೀವರ್ ಕ್ಲೀನಿಕ್ ಮಾಡಲು ಕ್ರಮ

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸುವ ನಿಟ್ಟಿನಲ್ಲಿ, ಜ್ವರ ಪ್ರಕರಣ(ಫೀವರ್ ಕ್ಲೀನಿಕ್)ಗಳನ್ನು ತಪಾಸಣೆ ನಡೆಸಲು ಕ್ರಮವಹಿಸಲಾಗಿದೆ.  ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಐ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಲ್ಲಾ ಜ್ವರ ಪ್ರಕರಣಗಳನ್ನು ತಪಾಸಣೆ ನಡೆಸಿ, ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿರುತ್ತದೆ.

ಕೊರೊನಾ ವೈರೆಸ್ ಸೋಂಕಿನಿಂದ ಉಂಟಾಗಬಹುದಾದ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಲವು ಕರ್ತವ್ಯಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ವಲಯಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ