NEWSನಮ್ಮರಾಜ್ಯ

ಖಾತೆಯಲ್ಲಿಯೇ ಇರಲಿದೆ ಜನಧನ್ ಹಣ ಆತಂಕ ಬೇಡ ಎಂದ ಬಾಲಚಂದ್ರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಜನಧನ್ ಖಾತೆಗೆ ಬಂದಿರುವ ಹಣ ಖಾತೆಯಲ್ಲಿಯೇ ಇರಲಿದೆ. ಫಲಾನುಭವಿಗಳು ಆತಂಕ ಪಡಬೇಕಿಲ್ಲ. ಬ್ಯಾಂಕುಗಳಿಗೆ ಮುಗಿಬೀಳಬೇಕಿಲ್ಲ ಎಂದು ಲೀಡ್ ಬ್ಯಾಂಕ್ ಮುಖ್ಯಸ್ಥ ಬಾಲಚಂದ್ರ ತಿಳಿಸಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರ ಲಾಕ್‍ಡೌನ್ ಮಾಡಿದೆ. ಈ ವೇಳೆ ಮಹಿಳೆಯರಿಗಾಗಿ ತಿಂಗಳಿಗೆ 500 ರೂ. ನೀಡಲಾಗುತ್ತಿದೆ. ಆ ಹಣ ಪಡೆಯಲು ಜನ ಬ್ಯಾಂಕುಗಳಿಗೆ ಮುಗಿಬೀಳುತ್ತಿದ್ದಾರೆ. ಇದರಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಕೊರೊನಾ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ. ತುಂಬಾ ಅವಶ್ಯವಿದ್ದರೆ ಮಾತ್ರ ಬ್ಯಾಂಕಿಗೆ ಬನ್ನಿ. ಇಲ್ಲವಾದರೆ ಮನೆ ಬಾಗಿಲಿಗೆ ಬ್ಯಾಂಕ್ ಮಿತ್ರರು ಬಂದು ಹಣ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಜನ್‍ಧನ್ ಖಾತೆಯ ಮಹಿಳೆಯರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜೆನೆಯಲ್ಲಿ ನೀಡಲಾಗುತ್ತಿರುವ ಹಣವನ್ನು ಯಾವುದೇ ಬ್ಯಾಂಕುಗಳು ವಾಪಾಸ್ ಕಳುಹಿಸುವುದಿಲ್ಲ. ಫಲಾನುಭವಿಗಳು ಆತಂಕವಿಲ್ಲದೇ ಸುರಕ್ಷತೆಗೆ ಆದ್ಯತೆ ನೀಡಿ ಎಂದು ತಿಳಿಸಿದ್ದಾರೆ.

ಕೊರೊನಾದಿಂದ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಜನ್‍ಧನ್ ಮಹಿಳಾ ಖಾತೆದಾರರಿಗೆ ಪ್ರತಿ ತಿಂಗಳು ತಲಾ 500 ರೂ.ನಂತೆ ಮೂರು ತಿಂಗಳು ಹಣವನ್ನು ಖಾತೆಗಳಿಗೆ ಕೇಂದ್ರ ಸರಕಾರ ಜಮೆ ಮಾಡಲಿದೆ. ಬ್ಯಾಂಕುಗಳಿಗೆ ಜಮೆಯಾಗಿರುವ ಹಣವನ್ನು ತೆಗೆದುಕೊಳ್ಳದೇ ಹೋದರೆ ಕೇಂದ್ರ ಸರ್ಕಾರವೇ ಅದನ್ನು ವಾಪಾಸ್ ತೆಗೆದುಕೊಳ್ಳಲಿದೆ ಎಂಬುದು ಊಹಾಪೆÇೀಹವಾಗಿದ್ದು 500 ರೂ.ಗಳನ್ನು ತಿಂಗಳಿಗೆ ತೆಗೆದುಕೊಳ್ಳಬಹುದು. ಇಲ್ಲವೇ ಮೂರು ತಿಂಗಳು ಸೇರಿ 1,500ರೂ. ಗಳನ್ನು ಮೂರು ತಿಂಗಳ ನಂತರವೂ ತೆಗೆದುಕೊಳ್ಳಬಹುದು, ಇಲ್ಲವೇ ಎಂದಾದರು ಬಿಡುವು ಮಾಡಿಕೊಂಡು ಹಣ ತೆಗೆದುಕೊಳ್ಳಬಹುದು ಎಂದು ಕೋರಿದ್ದಾರೆ.

ಕೇಂದ್ರ ಸರ್ಕಾರ ಜನ್‍ಧನ್ ಖಾತೆಗಳಿಗೆ ಹಾಕಿದ ಹಣವನ್ನು ವಾಪಾಸ್ ತೆಗೆದುಕೊಳ್ಳುವುದಿಲ್ಲ. ಜನ್ ಧನ್ ಮಹಿಳಾ ಖಾತೆದಾರರು ಬ್ಯಾಂಕ್ ಗಳಿಗೆ ಮುಗಿಬೀಳುವ ಅವಶ್ಯಕತೆ ಇಲ್ಲ. ಮೂರು ತಿಂಗಳ ನಂತರವೂ ಕೂಡಾ ನಿಮ್ಮ ಹಣ ಖಾತೆಯಲ್ಲಿಯೇ ಇರಲಿದೆ. ಈಗಾಗಲೇ ಜನ ಜನ್‍ಧನ್ ಹಣ ವಾಪಾಸ್ ಹೋಗುತ್ತಿದೆ ಎಂದು ತಪ್ಪು ತಿಳಿದಿರುವುದರಿಂದ ಬ್ಯಾಂಕುಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಉಲ್ಲಂಘನೆಯಾಗುತ್ತಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯಸ್ಥ ಆರ್.ಕೆ.ಬಾಲಚಂದ್ರ ತಿಳಿಸಿದ್ದಾರೆ.

1 Comment

  • ಜನಧನ್ ಖಾತೆ ಗ್ರಾಹಕರು ದಿಗಿಲುಬಿದ್ದು ಈರೀತಿ ಮಾಡುತ್ತಿದ್ದಾರೆ. ತಿಳುವಳಿಕೆ ಕಡಿಮೆ ಹಾಗಾಗಿ ಅವರಿಗೆ ಬ್ಯಾಂಕ್ ಸಿಬ್ಬಂದಿ ತಿಳಿ ಹೇಳಬೇಕು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು