NEWSಕೃಷಿನಮ್ಮರಾಜ್ಯ

ಖಾಲಿ ಬಿಂದಿಗೆ ಹೊತ್ತು ಕಾವೇರಿ ನೀರು ಉಳಿಸಿ ಧರಣಿ: ಫ್ರೀಡಂ ಪಾರ್ಕಲ್ಲಿ ಕಜಸಂಸ ಹೋರಾಟ ನಾಲ್ಕನೇ ದಿನವೂ ಮುಂದುವರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಬೆದರಿಕೆಗೆ ಅಂಜಿ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸದಿದ್ದರೆ ರಾಜ್ಯದ ಉದ್ದಗಲಕ್ಕೂ ಮಂತ್ರಿಗಳಿಗೆ ಘೇರಾವ್ ಮಾಡುವ ಚಳವಳಿಗೆ ಕರೆ ನೀಡಬೇಕಾಗುತ್ತದೆ. ಅಲ್ಲದೆ ದಸರಾ ಆಚರಣೆಗೆ ಅಡ್ಡಿ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಸಿದರು.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಫ್ರೀಡಂ ಪಾರ್ಕಲ್ಲಿ ಕಾವೇರಿ ನೀರು ಉಳಿಸಿ ಎಂದು ಹಮ್ಮಿಕೊಂಡಿರುವ ಧರಣಿ ಗುರುವಾರವಾದ ಇಂದಿಗೆ ನಾಲ್ಕನೇ ದಿನ ಪೂರೈಸಿದ್ದು, ಐದನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ, ನೀರಾವರಿ ಮಂತ್ರಿಗಳು ಇಂಡಿಯಾ ಒಕ್ಕೂಟ ಬೇಕೋ ಅಥವಾ ರಾಜ್ಯದ ಜನ ಬೇಕೋ ಎಂಬುದನ್ನು ನಿರ್ಧರಿಸಿ, ಪದೇಪದೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮಾತಿನ ಒತ್ತಡಕ್ಕೆ ಅಂಜಬೇಡಿ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ಆದೇಶದಿಂದ ರಾಜ್ಯದ ಜನರಿಗೆ ಆಗುತ್ತಿರುವ ಸಂಕಷ್ಟದ ಬಗ್ಗೆ ವಿವರಿಸಲು ಕೇಂದ್ರ ಸರ್ಕಾರದ ಗಮನ ಸಳೆಯಲು ಸದ್ಯದಲ್ಲಿಯೇ ಸಮಿತಿಯ ಮುಖಂಡರ ನಿಯೋಗ ದೆಹಲಿಗೆ ತೆರಳಲಿದೆ ಏಂದ ಅವರು, ಕಾವೇರಿ ಅಚ್ಚು ಕಟ್ಟು ಭಾಗದ ಎಲ್ಲ ಲೋಕಸಭಾ ಸದಸ್ಯರಿಗೆ ಪತ್ರ ಬರೆಯಲಾಗಿದೆ. ನಿಯೋಗದ ಜತೆ ಜಲಶಕ್ತಿ ಸಚಿವರ ಭೇಟಿಗೆ ಅವಕಾಶ ಕೋರಬೇಕೆಂದು ಲೋಕಸಭಾ ಸದಸ್ಯರಿಗೆ ವಿನಂತಿಸಲಾಗಿದೆ ಎಂದು ತಿಳಿಸಿದರು.

ಇನ್ನು ಇಂದು ಖಾಲಿ ಬಿಂದಿಗೆಗಳನ್ನು ತಲೆ ಮೇಲೆ ಹೊತ್ತು ಕಾವೇರಿ ನಮ್ಮದು ಕಾವೇರಿ ಉಳಿಸಿ ಎಂದು ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ನಾಲ್ಕನೇ ದಿನದ ಧರಣಿ ಮುಂದುವರಿಸಿದರು. ಧರಣಿಯಲ್ಲಿ ಕನ್ನಡ ಚಳವಳಿಯ ಗುರುದೇವ ನಾರಾಯಣ್, ಮುಖಂಡ ನಾಡ ಸೇನಾನಿ ಕೆಂಪೇಗೌಡ ಪ್ರತಿಷ್ಠಾನ ಅಧ್ಯಕ್ಷ ಮೋಹನ್, ದಲಿತ ಸಂಘಟನೆಗಳ ಒಕ್ಕೂಟದ ವೆಂಕಟಸ್ವಾಮಿ, ಅಮ್ಮಾ ಆದ್ಮಿ ಪಕ್ಷದ ವಿಶ್ವನಾಥ್ ಟಿ.ಸಾಹಿತಿ ಶ್ರೀನಿವಾಸ್, ಸೂರ್ಯನಾರಾಯಣ್ ರೈತ ಮುಖಂಡ ಗಜೇಂದ್ರ, ಕಮಲಮ್ಮ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು