NEWSನಮ್ಮರಾಜ್ಯ

ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಯಲ್ಲಿ ಉಳಿಯಲು ಸುಪ್ರೀಂ ಕೋರ್ಟ್‌ ಸಮ್ಮತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಜಿಲ್ಲೆಗಳಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ಹಿಂದಿನ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿದಾಗ ಅವರು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ರೆಡ್ಡಿ ಅವರ ಉತ್ತಮ ನಡತೆ ಆಧಾರದ ಮೇಲೆ ಈ ಅನುಮತಿ ಕೊಟ್ಟಿದೆ.

ಈ ಪ್ರಕರಣದ ವಿಚಾರಣೆ ಇನ್ನೂ ಆರಂಭಗೊಂಡಿಲ್ಲ. ಅರ್ಜಿದಾರರು ಬಳ್ಳಾರಿಗೆ ಭೇಟಿ ನೀಡಿದಾಗ ಯಾವುದೇ ಜಾಮೀನು ಷರತ್ತನ್ನು ಉಲ್ಲಂಘಿಸಿಲ್ಲ. ಪ್ರಕರಣದ ಈ ಸಂಗತಿಗಳು ಮತ್ತು ಸನ್ನಿವೇಶಗಳನ್ನು ನೋಡಿದರೆ, ಜಾಮೀನು ಆದೇಶವನ್ನು ಮಾರ್ಪಡಿಸುವಂತೆ ನಿರ್ದೇಶಿಸಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಹೇಳಿದರು.

2015ರ ಜ. 20ರಂದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು, ಆದರೆ ಈ ಜಿಲ್ಲೆಗಳಿಗೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು. ಆದರೆ ಈಗ ಬಳ್ಳಾರಿ (ಕರ್ನಾಟಕ), ಕಡಪ ಮತ್ತು ಅನಂತಪುರ (ಆಂಧ್ರ ಪ್ರದೇಶ) ಜಿಲ್ಲೆಗಳಿಗೆ ಭೇಟಿ ನೀಡಲು ಮತ್ತು ಉಳಿದುಕೊಳ್ಳಲು ರೆಡ್ಡಿಗೆ ಅನುಮತಿ ನೀಡಲಾಗಿದೆ.

ರೆಡ್ಡಿ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಸಿಬಿಐ ತನ್ನ ತನಿಖೆಯನ್ನು ಪೂರ್ಣಗೊಳಿಸಿದ್ದರಿಂದ ತನ್ನ ಕಕ್ಷಿದಾರನ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದರು ಅವರ ವಾದವನ್ನು ಪರಿಗಣಿಸಿದ ದ್ವಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿತು.

ಅರ್ಜಿದಾರರು ತಮ್ಮ ಊರಾದ ಬಳ್ಳಾರಿಯಿಂದ ಎಷ್ಟು ದಿನ ಹೊರಗಿರಬೇಕು. ಈ ಷರತ್ತನ್ನು ಮನ್ನಾ ಮಾಡಬೇಕು. ಪ್ರಕರಣದಲ್ಲಿ ಈಗಾಗಲೇ ಸುಮಾರು 10,000 ದಾಖಲೆಗಳು ಮತ್ತು 300 ಸಾಕ್ಷಿಗಳಿದ್ದರೆ. ಈ ವಿಚಾರಣೆ ಮುಂದಿನ10 ವರ್ಷಗಳು ಸಾಗಬಹುದು. ಅಲ್ಲಿಯವರೆಗೆ ಊರಿಗೆ ಭೇಟಿ ನೀಡದಿರುವಂತಹ ನಿಯಮ ಕಠಿಣವಾಗಿದೆ ಎಂದು ವಾದಿಸಿದರು.

ಮತ್ತೊಂದೆಡೆ, ಸಿಬಿಐ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ಆರೋಪಿ ಈಗಲೂ ಸಾಕ್ಷಿಗಳನ್ನು ಬೆದರಿಸುವ ಮತ್ತು ಲಂಚ ನೀಡುವ ಮೂಲಕ ಹೇಳಿಕೆ ಬದಲಿಸಲು ಪ್ರಯತ್ನಿಸಬಹುದು ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು