NEWSನಮ್ಮಜಿಲ್ಲೆ

ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳಿಗೆ ವಿನಾಯಿತಿ

 ಕೊರೊನಾ ತಡೆಗೆ ಲಾಕ್ ಡೌನ್ l  ಅಗತ್ಯ ಸೇವೆಗಳ ವಾಹನ ಸಂಚಾರ ಮುಕ್ತ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ:  ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಜಿಲ್ಲೆಯಾದ್ಯಂತ 144 ಜಾರಿಗೊಳಿಸಿ, ಸಾರ್ವಜನಿಕರಿಗೆ ಮನೆಯಿಂದ ಹೊರಬಂದಂತೆ ಆದೇಶಿಸಲಾಗಿದೆ.

ಆದರೆ ತರಕಾರಿ, ಹಾಲು, ಕಿರಾಣಿ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಪೂರೈಕೆ ಮಾಡಲು ಹಾಗೂ ಕೋವಿಡ್ 19 ತಡೆಗಟ್ಟುವ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ, ಖಾಸಗಿ ಸಂಸ್ಥೆಯ ವಾಹನಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ಇಲಾಖೆ, ಕಚೇರಿಗಳಿಂದ ನೀಡಲ್ಪಟ್ಟ ಗುರುತಿನ ಚೀಟಿಗಳನ್ನು ಹೊಂದಿರುವ ಕರ್ತವ್ಯ ನಿರತರಿಗೆ ಅವರ ಕಾರ್ಯಕ್ಷೇತ್ರದಲ್ಲಿ ವಿನಾಯಿತಿ ನೀಡಲಾಗಿದೆ. ಎಲ್ಲಾ ಸರ್ಕಾರಿ ವಾಹನಗಳಿಗೆ ವಿನಾಯಿತಿ ಇದೆ. ಸರ್ಕಾರ ಹೊರಗುತ್ತಿಗೆ ಮೂಲಕ ಪಡೆದುಕೊಂಡ ಖಾಸಗಿ ವಾಹನಗಳಿಗೆ ಜಿಲ್ಲಾಡಳಿತ ವಾಹನ ಪಾಸುಗಳನ್ನು ನೀಡಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಅಗತ್ಯ ವಸ್ತುಗಳ ಮಾರಾಟ ಮಾಡುವ ಅಂಗಡಿಯವರು ಮತ್ತು ಸಿಬ್ಬಂದಿ ವಾಹನಗಳಿಗೆ , ಸರ್ಕಾರಿ ಮತ್ತು ಖಾಸಗಿ ವೈದ್ಯರು, ನರ್ಸ್ ಗಳು, ಅರೆ ವೈದ್ಯಕೀಯ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಿಬ್ಬಂದಿ , ಪತ್ರಿಕಾ ವಿತರಣೆ ವಾಹನಗಳು, ಪತ್ರಿಕೆ ಹಂಚುವವರು, ಅವಶ್ಯ ಸರಕು ಸೇವೆಗಳ ಸಾಗಾಣಿಕೆ ವಾಹನಗಳು, ಅವಶ್ಯಕ ಸಾಮಗ್ರಿಗಳ ಉತ್ಪಾದನಾ ಕಾರ್ಖಾನೆಗಳ ಕಾರ್ಮಿಕರಿಗೆ ಸರ್ಕಾರದ ಸುತ್ತೋಲೆಯ ನಿರ್ಬಂಧದಂತೆ ಅವರ ವಾಸ ಸ್ಥಳದಿಂದ ಕಾರ್ಖಾನೆಯ ಸ್ಥಳಕ್ಕೆ ಹೋಗಿ ಬರಲು ಹಾಗೂ ಜಿಲ್ಲಾಡಳಿತ ಕೋವಿಡ್ 19 ಸೇವೆಯಲ್ಲಿ ನಿರತರಾದವರಿಗೆ ನೀಡಿದ ಗುರುತಿನ ಚೀಟಿ ಹೊಂದಿರುವ ವ್ಯಕ್ತಿಗಳು ಮತ್ತು ವಾಹನಗಳಿಗೆ ಸಂಚರಿಸಲು ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ