NEWSನಮ್ಮಜಿಲ್ಲೆನಮ್ಮರಾಜ್ಯ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕರೆ ನೀಡರುವ ಅನಿರ್ದಿಷ್ಟಾವಧಿ ಮುಷ್ಕರ ಇಂದಿನಿಂದ ಆರಂಭವಾಗಿದ್ದು, ರೈತರ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ.

ಪಟ್ಟಣದ ತಾಲೂಕು ಆಡಳಿತ ಕಾರ್ಯ ಸೌಧದ ಆವರಣದಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಂಘದ ಜಿಲ್ಲಾಧ್ಯಕ್ಷ ಹರೀಶ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಈ ವೇಳೆ ಮಾತನಾಡಿದ ಮಂಡ್ಯ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಗ್ರಾಮ ಆಡಳಿತ ಅಧಿಕಾರಿಗಳ ಮೂರು ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿದರು.

ಮೊಬೈಲ್ ಆಫ್ ಬಳಕೆ, ವೆಬ್ ಪೇಜ್ ಸಮಸ್ಯೆ ಸೇರಿದಂತೆ, ರಜಾ ದಿನಗಳಲ್ಲಿಯೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಸದಾ ಮಾನಸಿಕ ಒತ್ತಡಗಳ ನಡುವೆ ಕೆಲಸ ಮಾಡುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಮಾನವೀಯ ನೆಲಗಟ್ಟಿನ ಆಧಾರದ ಮೇರೆಗೆ ಬಗೆಹರಿಸಿ ಅನುಕೂಲ ಮಾಡಿ ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೇವಾ ಮುಂಬಡ್ತಿ ನೀಡುವುದು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವುದು ಸೇರಿದಂತೆ ರಾಜ್ಯದಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ 5000ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹರೀಶ್ ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಚಂದ್ರಕಲಾ ಅವರು ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲವನ್ನು ಸೂಚಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ