NEWSನಮ್ಮಜಿಲ್ಲೆ

ಗ್ರೀನ್ ಜೋನ್‍ನತ್ತ ದಾಪುಗಾಲಿಡುತ್ತಿದೆ ದಾವಣಗೆರೆ ಜಿಲ್ಲೆ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ವರದಿಯಾಗಿದ್ದ 3 ಕೊರೊನಾ ಪ್ರಕರಣಗಳಿಂದ ಆರೆಂಜ್ ಜೋನ್‍ನಲ್ಲಿದ್ದ ದಾವಣಗೆರೆ ಜಿಲ್ಲೆ ಗ್ರೀನ್ ಜೋನ್‍ನತ್ತ ದಾಪುಗಾಲಿಡುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿಯಾದ ನಂತರ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದಿದ್ದರೆ ಅದನ್ನು ಗ್ರೀನ್ ಜೋನ್ ಗೆ ಸೇರಿಸಲಾಗುತ್ತದೆ. ಅಂದರೆ ಜಿಲ್ಲೆ ಸದ್ಯಕ್ಕೆ ಸೇಫ್.

ಹಾಗಂತ ಮೈಮರೆಯುವಂತಿಲ್ಲ. ಒಮ್ಮೊಮ್ಮೆ ಇದು ಹಿಂದು ಮುಂದಾಗಬಹುದು.ಯಾವುದೇ ಪ್ರಕರಣಗಳು ವರದಿಯಾಗದಿದ್ದರೆ ಹಸಿರು ಜೋನ್‍ನಲ್ಲಿದ್ದ ಜಿಲ್ಲೆಗಳು ಒಟ್ಟಿಗೇ ಅಲರ್ಟ್ ಜೋನ್‍ಗಳಲ್ಲಿ ಬರಬಹುದು. ಹಾಗಾಗಿ ಬಹಳ ಎಚ್ಚರಿಕೆಯಿಂದ ಶ್ರ ವಹಿಸಬೇಕಾಗಿದೆ.

ಆದರೆ ಸದ್ಯಕ್ಕಂತೂ ಜಿಲ್ಲೆಯ ಜನ ನಿಟ್ಟಿಸುರು ಬಿಟ್ಟಿದ್ದಾರೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ಕಾರ್ಯ ವೈಕರಿಗೆ ಭೇಷ್ ಎಂದು ಬೆನ್ನು ತಟ್ಟುತ್ತಿದ್ದಾರೆ.

ಮಾರ್ಚ್ 23 ರಂದು ಕೊರೊನಾ ಮೊದಲ ಪ್ರಕರಣ ಚಿತ್ರದುರ್ಗ ಜಿಲ್ಲೆಯದ್ದಾಗಿದ್ದರೂ ತಾಂತ್ರಿಕವಾಗಿ ದಾವಣಗೆರೆಗೆ ಸೇರಿತು. ನಂತರ ಮಾರ್ಚ್ 27 ರಂದು ಫ್ರಾನ್ಸ್‍ನಿಂದ ಆಗಮಿಸಿದ ಯುವಕನಲ್ಲಿ ಸೋಂಕು ಕಾಣಿಸಿಕೊಂಡು ಕೇಸ್ ಎರಡಾಯಿತು. ನಂತರ ಅಮೇರಿಕಾದಿಂದ ಆಗಮಿಸಿದ್ದ ಯುವಕನಲ್ಲಿ ಸೋಂಕು ದೃಢಪಟ್ಟು ಆ ಸಂಖ್ಯೆ ಮೂರಕ್ಕೇರಿದ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನರಿಗೆ ತಲೆಬಿಸಿ ಜಾಸ್ತಿಯಾಗುವಂತೆ ಮಾಡಿತ್ತು. ತನ್ನಿಂತಾನೇ ಜನರಲ್ಲಿ ಜಾಗೃತಿ ಹೆಚ್ಚಾಗತೊಡಗಿತು.

ಇದೇ ವೇಳೆ ಘೋಷಣೆಯಾದ ಲಾಕ್‍ಡೌನ್ ಬಹಳ ಕಟ್ಟುನಿಟ್ಟಾಗಿ ಜಾರಿಯಾಗುವುದರೊಂದಿಗೆ ಯುದ್ದೋಪಾದಿಯಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸಿ ಸೋಂಕು ಮುಕ್ತವವಾಗುವವರೆಗೆ ಅವಿರತ ಶ್ರಮಿಸಿದ್ದು ಎಲ್ಲೋ ಒಂದು ಕಡೆ ಫಲ ನೀಡಿದೆ.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಆರೋಗ್ಯ ಇಲಾಖೆಯ ತಂಡ ವಹಿಸಿದ್ದ ಮುನ್ನೆಚ್ಚರಿಕೆ ಅಷ್ಟಿಷ್ಟಲ್ಲ. ಅದರೊಡನೆ ಎಲ್ಲಾ ಇಲಾಖೆ ಅಧಿಕಾರಿಗಳೂ ನೀಡಿದ ಸಾಥ್ ಕೂಡ ಅಷ್ಟೇ ಪ್ರಮುಖ ಪಾತ್ರ ವಹಿಸಿದೆ. ಕೇಂದ್ರ ಆರೋಗ್ಯ ಇಲಾಖೆ ಜಿಲ್ಲೆಯನ್ನು ಗ್ರೀನ್ ಜೋನ್ ಎಂದು ಘೋಷಣೆ ಮಾಡುವ ಬಗ್ಗೆ ಜಿಲ್ಲೆ ಎದುರು ನೋಡಿತ್ತಿದೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ