NEWSನಮ್ಮಜಿಲ್ಲೆಶಿಕ್ಷಣ-

ಚಿಕ್ಕಪೇಟೆ ಶಾಲೆ ಮಾರಾಟ – ಶಾಸಕ ದಿನೇಶ್ ಗುಂಡೂರಾವ್ ಪಾತ್ರವೇನು: ಮಥಾಯಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕಪೇಟೆಯ ಸರ್ಕಾರಿ ಶಾಲೆ ಕಟ್ಟಡವನ್ನು ಮಾರಾಟ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ನಿವೃತ್ತ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆ.ಮಥಾಯಿ, ಸ್ವಾತಂತ್ರ್ಯ ಪೂರ್ವದಲ್ಲಿ ದಾನಿಗಳು ನೀಡಿದ ಜಾಗದಲ್ಲಿ ಚಿಕ್ಕಪೇಟೆಯ ಸರ್ಕಾರಿ ಶಾಲೆಯನ್ನು ನಿರ್ಮಿಸಲಾಗಿದೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವ ಈ ಕಟ್ಟಡವನ್ನು ರಾಜ್ಯ ಬಿಜೆಪಿ ಸರ್ಕಾರವು ಮಾರಾಟ ಮಾಡಲು ನಿರ್ಧರಿಸಿರುವುದು ಭ್ರಷ್ಟಾಚಾರ ಕರಾಳ ಸ್ವರೂಪ. ಕೋಟಿಗಟ್ಟಲೆ ಕಮಿಷನ್‌ ಆಸೆಗಾಗಿ ಅಮೂಲ್ಯ ಸಂಪತ್ತನ್ನು ಮಾರುವ ನಿರ್ಧಾರವನ್ನು ಸರ್ಕಾರ ಕೈಬಿಡದಿದ್ದರೆ ಎಎಪಿಯು ಬೃಹತ್‌ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

ಆಡಳಿತ ಪಕ್ಷವು 40 % ಕಮೀಷನ್ ಭ್ರಷ್ಟಾಚಾರದ ಮುಂದುವರಿದ ಭಾಗವಾಗಿ 10 ಸಾವಿರ ಚದರ ಅಡಿ ಇರುವಂತಹ, ನೂರಾರು ಕೋಟಿ ರೂ. ಬೆಲೆಬಾಳುವ ಸರ್ಕಾರಿ ಶಾಲೆಯನ್ನು ಮಾರುವ ದುಸ್ಸಾಹಸಕ್ಕೆ ಕೈಹಾಕಿದ್ದರೂ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್‌ ವಿರೋಧಿಸುತ್ತಿಲ್ಲ.

ಅಲ್ಲದೆ ಸರ್ಕಾರಿ ಆಸ್ತಿಯನ್ನು ರಕ್ಷಿಸುವುದು ಶಾಸಕರ ಕರ್ತವ್ಯವಾಗಿದ್ದು, ಸ್ಥಳೀಯ ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಸುಮ್ಮನಿರುವುದು ಸಹ ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಲೆಯ ಮಾರಾಟದಲ್ಲಿ ಅವರ ಪಾತ್ರವೇನು ಎಂಬುದು ಜನರಿಗೆ ತಿಳಿಯಬೇಕು ಎಂದು ಕೆ.ಮಥಾಯಿ ಆಗ್ರಹಿಸಿದರು.

ಒಂದೆಡೆ ಸರ್ಕಾರಿ ಶಾಲೆ ಆಸ್ತಿ ಸಂರಕ್ಷಣಾ ಅಭಿಯಾನಕ್ಕೆ ರಾಜ್ಯ ಶಿಕ್ಷಣ ಇಲಾಖೆ ಕರೆ ಕೊಟ್ಟಿದ್ದರೆ, ಮತ್ತೊಂದೆಡೆ ಐತಿಹಾಸಿಕ ಶಾಲೆಯ ಕಟ್ಟಡವನ್ನು ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸದೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಇಬ್ಬಂದಿತನ ಪ್ರದರ್ಶಿಸುತ್ತಿದ್ದಾರೆ. ಸಚಿವರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿದ್ದರೆ ಶಾಲಾ ಕಟ್ಟಡವನ್ನು ಸರ್ಕಾರದ ವಶದಲ್ಲೇ ಉಳಿಸಿಕೊಳ್ಳಲಿ ಎಂದು ತಾಕೀತು ಮಾಡಿದರು.

ಆಮ್‌ ಆದ್ಮಿ ಪಾರ್ಟಿಯ ಸ್ಥಳೀಯ ಮುಖಂಡರಾದ ಗೋಪಿನಾಥ್‌ ಮಾತನಾಡಿ, “ಸರ್ಕಾರಿ ಶಾಲೆಯನ್ನು ಮಾರಾಟ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಇನ್ನು ಕಟ್ಟಡದಲ್ಲಿ ಶಾಲೆ ಮಾತ್ರವಲ್ಲದೇ 141 ಮಳಿಗೆಗಳು, ಬ್ಯಾಂಕ್‌ ಹಾಗೂ ವಸತಿಗೃಹವಿದೆ. 300 ಕೋಟಿ ರೂಪಾಯಿಗೂ ಹೆಚ್ಚು ಬೆಲೆಬಾಳುವ ಈ ಆಸ್ತಿಯನ್ನು ಕೇವಲ 50 ಕೋಟಿ ರೂಪಾಯಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಪ್ರತಿಯಾಗಿ ಖರೀದಿದಾರರಿಂದ ಶಾಸಕರು, ಸಚಿವರು ಹಾಗೂ ಸಿಎಂಗೆ ಕೋಟಿಗಟ್ಟಲೆ ಕಮಿಷನ್‌ ಸಿಗಲಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ವಕ್ತಾರರಾದ ಉಷಾ ಮೋಹನ್‌ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ