CrimeNEWSನಮ್ಮರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನೀನಾಸಂ ಅಶ್ವಥ್ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಚೆಕ್ ಬೌನ್ಸ್ ಪ್ರಕರಣದಲ್ಲಿ ಚಲನಚಿತ್ರ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ನಟ ನೀನಾಸಂ ಅಶ್ವಥ್ ಶೇ.25 ರಷ್ಟು ಹಣ ಪಾವತಿಸಿ, ಜಾಮೀನು ಕೊಟ್ಟ ಬಳಿಕ ನಟನನ್ನು ಬಿಡುಗಡೆ ಮಾಡಲಾಗಿದೆ.

ಹಾಸನ ಮೂಲದ ರೋಹಿತ್ ಎಂಬವರಿಂದ ನಟ ಅಶ್ವಥ್ ಹಸುಗಳನ್ನು ಖರೀದಿ ಮಾಡಿದ್ದು, ಆ ವೇಳೆ 1.5 ಲಕ್ಷ ರೂಪಾಯಿಯ ಚೆಕ್ ನೀಡಿದ್ದರು. ಬಳಿಕ ರೋಹಿತ್ ಬ್ಯಾಂಕ್‌ಗೆ ಚೆಕ್ ಹಾಕಿದಾಗ ಅದು ಬೌನ್ಸ್ ಆಗಿತ್ತು.

ಈ ಸಂಬಂಧ ರೋಹಿತ್ ಹಾಸನದ ಜೆಎಂಎಫ್‌ಸಿ‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು, ಕೋರ್ಟ್ ನಾಲ್ಕು ಬಾರಿ ಅರೆಸ್ಟ್ ವಾರೆಂಟ್ ಹೊರಡಿಸಿತ್ತು.‌ ಆದರೂ ನೀನಾಸಂ ಅಶ್ವಥ್ ಕ್ಯಾರೆ ಎನ್ನಲಿಲ್ಲ.

ಇನ್ನು ನಾಲ್ಕೂ ಬಾರಿಯೂ ನಟ ಅಶ್ವಥ್ ಕೋರ್ಟ್‌ಗೆ ಹಾಜರಾಗದ ಹಿನ್ನೆಯಲ್ಲಿ ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದರಿಂದ ಹಾಸನ ಬಡಾವಣೆ ಠಾಣೆ ಪೊಲೀಸರು ಶನಿವಾರ ರಾತ್ರಿ ಅಶ್ವಥ್‌ನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಶ್ವಥ್ ಈಗಲೇ ಶೇ.25 ರಷ್ಟು ಹಣ ಪಾವತಿಸುತ್ತೇನೆ ಎಂದು ಉಳಿದ ಹಣ ನೀಡಲು ಸಮಯ ಕೊಡಬೇಕು ಎಂದು ನ್ಯಾಯಾಧೀಶ ಬಳಿ ಮನವಿ ಮಾಡಿದರು. ಶೇ.25 ರಷ್ಟು ಹಣ ಪಾವತಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ನಟನನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು