CrimeNEWSನಮ್ಮರಾಜ್ಯ

ಚೆಕ್ ಬೌನ್ಸ್ ಪ್ರಕರಣ: ಚಲನಚಿತ್ರ ನಟ ನೀನಾಸಂ ಅಶ್ವಥ್ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಚೆಕ್ ಬೌನ್ಸ್ ಪ್ರಕರಣದಲ್ಲಿ ಚಲನಚಿತ್ರ ನಟ ನೀನಾಸಂ ಅಶ್ವಥ್ ಅವರನ್ನು ಹಾಸನ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ನಟ ನೀನಾಸಂ ಅಶ್ವಥ್ ಶೇ.25 ರಷ್ಟು ಹಣ ಪಾವತಿಸಿ, ಜಾಮೀನು ಕೊಟ್ಟ ಬಳಿಕ ನಟನನ್ನು ಬಿಡುಗಡೆ ಮಾಡಲಾಗಿದೆ.

ಹಾಸನ ಮೂಲದ ರೋಹಿತ್ ಎಂಬವರಿಂದ ನಟ ಅಶ್ವಥ್ ಹಸುಗಳನ್ನು ಖರೀದಿ ಮಾಡಿದ್ದು, ಆ ವೇಳೆ 1.5 ಲಕ್ಷ ರೂಪಾಯಿಯ ಚೆಕ್ ನೀಡಿದ್ದರು. ಬಳಿಕ ರೋಹಿತ್ ಬ್ಯಾಂಕ್‌ಗೆ ಚೆಕ್ ಹಾಕಿದಾಗ ಅದು ಬೌನ್ಸ್ ಆಗಿತ್ತು.

ಈ ಸಂಬಂಧ ರೋಹಿತ್ ಹಾಸನದ ಜೆಎಂಎಫ್‌ಸಿ‌ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು, ಕೋರ್ಟ್ ನಾಲ್ಕು ಬಾರಿ ಅರೆಸ್ಟ್ ವಾರೆಂಟ್ ಹೊರಡಿಸಿತ್ತು.‌ ಆದರೂ ನೀನಾಸಂ ಅಶ್ವಥ್ ಕ್ಯಾರೆ ಎನ್ನಲಿಲ್ಲ.

ಇನ್ನು ನಾಲ್ಕೂ ಬಾರಿಯೂ ನಟ ಅಶ್ವಥ್ ಕೋರ್ಟ್‌ಗೆ ಹಾಜರಾಗದ ಹಿನ್ನೆಯಲ್ಲಿ ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದರಿಂದ ಹಾಸನ ಬಡಾವಣೆ ಠಾಣೆ ಪೊಲೀಸರು ಶನಿವಾರ ರಾತ್ರಿ ಅಶ್ವಥ್‌ನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ಅಶ್ವಥ್ ಈಗಲೇ ಶೇ.25 ರಷ್ಟು ಹಣ ಪಾವತಿಸುತ್ತೇನೆ ಎಂದು ಉಳಿದ ಹಣ ನೀಡಲು ಸಮಯ ಕೊಡಬೇಕು ಎಂದು ನ್ಯಾಯಾಧೀಶ ಬಳಿ ಮನವಿ ಮಾಡಿದರು. ಶೇ.25 ರಷ್ಟು ಹಣ ಪಾವತಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ನಟನನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ