NEWSನಮ್ಮರಾಜ್ಯಸಂಸ್ಕೃತಿ

ಚುಂಚನಗಿರಿ: 250 ಒಕ್ಕಲಿಗ ವಧುಗಳನ್ನು ವರಿಸಲು ಬಂದಿದ್ದು ಬರೋಬರಿ 12 ಸಾವಿರಕ್ಕೂ ಹೆಚ್ಚು ವರರು- ವಧುಗಾಗಿ ನೂಕು ನುಗ್ಗಲು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ರಾಜ್ಯದಲ್ಲಿ ಒಕ್ಕಲಿಗ ಹುಡುಗರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎಂಬುವುದಕ್ಕೆ ಚುಂಚನಗಿರಿಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ವಧು – ವರ ಸಮಾವೇಶವೇ ಸಾಕ್ಷಿಯಾಗಿದೆ ಎಂಬಂತಿತ್ತು.

ಹೌದು ಆದಿಚುಂಚನಗಿರಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಒಕ್ಕಲಿಗರ ವಧು-ವರರ ಸಮಾವೇಶದಲ್ಲಿ 25 ಸಾವಿರಕ್ಕೂದ ಸಮಾವೇಶಕ್ಕೆ 250 ಒಕ್ಕಲಿಗ ಹುಡುಗಿಯರು ಬಂದಿದ್ದರೆ, 12 ಸಾವಿರಕ್ಕೂ ಅಧಿಕ ಗಂಡು ಮಕ್ಕಳು ಬಾಳ ಸಂಗಾತಿಯನ್ನು ಅರಸಿ ಬಂದಿದ್ದರು.

ನಾಗಮಂಗಲ ತಾಲೂಕಿನ ಚುಂಚನಗಿಯಲ್ಲಿ ಇಂತಹ ದೃಶ್ಯ ಹಾಗೂ ಹುಡುಗರ ಅರ್ಜಿ ಸಂಖ್ಯೆ ನೋಡಿ ಸಮಾವೇಶ ಆಯೋಜಿಸಿದ್ದವರೇ ಸುಸ್ತಾಗಿ ಹೋದರು. ಹುಡುಗಿಯರಿಗಾಗಿ ಸಮಾವೇಶದಲ್ಲಿ ಸಾವಿರಾರು ಹುಡುಗರು ತಮ್ಮ ಹೆತ್ತವರೊಂದಿಗೆ ಕ್ಯೂ ನಿಂತಿದ್ದರು. ಮತ್ತೊಂದೆಡೆ ಈ ಹೆಚ್ಚಿನ ಜಮಸ್ತೋಮದಿಂದಾಗಿ ಚುಂಚನಗಿರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ಈ ಒಕ್ಕಲಿಗ ವಧು-ವರರ ಸಮಾವೇಶದಲ್ಲಿ 250 ವಧುಗಳನ್ನು ವರಿಸಲು 12 ಸಾವಿರಕ್ಕೂ ಹೆಚ್ಚು ಅವಿವಾಹಿತ ಪುರುಷರು ಭಾಗಿಯಾಗಿದ್ದರು. ಈ ಸಮಾವೇಶವು ಒಂದು ಆಘೋಷಿತ ಸ್ವಯಂವರದ ರೀತಿಯಲ್ಲಿ ಏನೋ ನಡೆಯಿತು. ಆದರೆ ಇದು ಲಿಂಗಾನುಪಾತದಲ್ಲಿನ ಅಸಮಾನತೆಯನ್ನು ಸಾಕ್ಷೀಕರಿಸಿತು ಎಂಬುದರಲ್ಲಿ ಎರಡು ಮಾತಿಲ್ಲ.

ವಧುಗಾಗಿ ವರರ ಸಾಗರವೇ ಮಠಕ್ಕೆ ಹರಿದುಬಂದಿದ್ದನ್ನು ನೋಡಿ ಆಶ್ಚರ್ಯವೂ ಉಂಟಾಯಿತು. ಜತೆಗೆ ಸರತಿ ಸಾಲಿನಲ್ಲಿ ನಿಂತಿರುವ ವರರ ಸಾಲು ನೋಡಿ ರಾಜ್ಯದಲ್ಲಿ ಲಿಂಗಾನುಪಾತದಲ್ಲಿ ಭಾರೀ ವ್ಯತ್ಯಾಸವಿದೆ. ಹೆಣ್ಣು ಮಕ್ಕಳು ಬೇಡವೆಂಬ ತಾತ್ಸಾರ ಮತ್ತು ಹೆಣ್ಣು ಭ್ರೂಣ ಹತ್ಯೆಯೂ ಇಂತಹ ಘಟನೆಗಳಿಗೆ ಕಾರಣವಿರಬಹುದು ಎಂಬುದನ್ನು ಮತ್ತೆ ಮತ್ತೆ ನೆನಪಿಸುವಂತಿತ್ತು.

ಇನ್ನು ವಧು- ವರರ ಪರೀಕ್ಷೆಗಾಗಿ ನಿಂತ ವೇಳೆ ನೂಕುನುಗ್ಗಲು ಉಂಟಾಗಿ ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆಯೂ ನಡೆಯಿತು. ಆದರೆ, ಇಲ್ಲಿ ಹೆಚ್ಚಾಗಿ ಕೃಷಿಯನ್ನೇ ಅವಲಂಬಿಸಿರುವ ರೈತರು ಮತ್ತು ರೈತರ ಮಕ್ಕಳೇ ಭಾಗವಹಿಸಿದ್ದು ಕಂಡುಬಂತು.

ಬಹುತೇ ಎಲ್ಲರೂ ಗ್ರಾಮೀಣ ಪ್ರದೇಶದಿಂದ ಬಂದಿವರೆ ಹೆಚ್ಚಾಗಿ ಕಾಣಿಸುತ್ತಿದ್ದರು. 25 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಮಠದ ಆವರಣದಲ್ಲಿ ಒಂದು ರೀತಿ ಜಾತ್ರೆಯ ಅನುಭವ ಕೂಡ ಆಗುತ್ತಿತ್ತು.

ಇನ್ನು ಈ ಮೊದಲೇ ಹೇಳಿದಂತೆ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ನಾಗಮಂಗಲ ತಾಲೂಕಿನ ಅಂಬಲಜೀರಹಳ್ಳಿ ಗ್ರಾಮದಿಂದ ಆದಿಚುಂಚನಗಿರಿ ಮಠದವರೆಗೆ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಮಾವೇಶ ಮುಗಿದ ನಂತರವೂ ಟ್ರಾಫಿಕ್​ ಜಾಮ್​ ಉಂಟಾಯಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ