NEWSಕೃಷಿನಮ್ಮಜಿಲ್ಲೆ

ಚೆಂಡು ಹೂವಿನ ಬೆಲೆ ತೀವ್ರ ಕುಸಿತ- ರಸ್ತೆ ಬದಿ ಹೂ ಸುರಿದು ಬೆಳೆಗಾರ ರೈತರ ಅಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಸಾಲು ಸಾಲು ಹಬ್ಬಗಳು ಮುಗಿದ ಬಳಿಕ ಚೆಂಡು ಹೂವಿನ (Marigold Flower) ಬೆಲೆ ತೀವ್ರ ಕುಸಿತವಾಗಿದೆ. ಈ ಹಿನ್ನೆಲೆ ರೈತರೊಬ್ಬರು ತಾವು ಬೆಳೆದ ಹೂವನ್ನು ರಸ್ತೆಬದಿ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನೆರ್ನಹಳ್ಳಿಯ ರೈತ ನಾರಾಯಣಪ್ಪ ಅವರು ದೇವರ ಪಾದದ ಬಳಿ ಇರಬೇಕಾದ ಹೂವನ್ನು ರಸ್ತೆಯಲ್ಲಿ ಚೆಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾಲ್ಕು ಎಕರೆ ಪ್ರದೇಶದಲ್ಲಿ ಒಂದು ಚೆಂಡು ಹೂ ಸಸಿಗೆ 4 ರೂ. ನೀಡಿ ನಾಟಿ ಮಾಡಿ, ಎಕರೆಗೆ ಸುಮಾರು 50 ಸಾವಿರ ರೂ. ಖರ್ಚು ಮಾಡಿ ಬೆಳೆಯಲಾಗಿದೆ. ಆದರೆ ಮಾರುಕಟ್ಟೆಯಲ್ಲಿ ಕೇಳುವವರಿಲ್ಲ, ಮಾರುಕಟ್ಟೆಗೆ ಹೋದರೆ ಕೆಜಿಗೆ 10 ರೂ. ನೀಡುತ್ತೇವೆ ಎಂದು ಹೇಳುತ್ತಾರೆ.

ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಇಲ್ಲದೆ ಹೂವಿನ ಬೆಳೆಗಾರರು ಕಂಗಾಲಾಗಿದ್ದಾರೆ. ನಾರಾಯಣಪ್ಪ ಎಕರೆಗೆ 50 ಸಾವಿರದಂತೆ ಖರ್ಚು ಮಾಡಿ ಚೆಂಡು ಹೂವು ಬೆಳೆದಿದ್ದರು. ಆದರೆ ಬೆಲೆ ಕುಸಿತ ಕಂಡ ಹಿನ್ನೆಲೆ ಕೋಲಾರ ಮುಖ್ಯರಸ್ತೆ ಬದಿಯಲ್ಲಿ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಮಾರುಕಟ್ಟೆಗೆ 50 ಕೆಜಿ ಚೆಂಡು ಹೂ ತೆಗೆದುಕೊಂಡು ಹೋದರೆ ಕೆಜಿಗೆ 10 ರೂ.ನಂತೆ ಮಾರುಕಟ್ಟೆಯ ಕಮಿಷನ್‌ ಕಳೆದು 400 ರೂ. ಮಾತ್ರ ಸಿಗುತ್ತದೆ. ಆದರೆ ಇಲ್ಲಿಂದ ಚೆಂಡು ಹೂ ಮಾರಾಟ ಮಾಡಲು ಮಾರುಕಟ್ಟೆಗೆ ದ್ವಿಚಕ್ರ ವಾಹನದಲ್ಲಿ ಹೋದರೂ ಸುಮಾರು 200 ರೂ. ಖರ್ಚಾಗುತ್ತದೆ. ಅದರಲ್ಲಿ ಊಟ ಇತರೆ ಖರ್ಚು ಕಳೆದರೆ ರೈತರಿಗೆ ಏನು ಸಿಗುವುದಿಲ್ಲ.

ಇನ್ನು ಚೆಂಡು ಹೂ ಕಟಾವು ಮಾಡಲು ಕೂಲಿ ಕಾರ್ಮಿಕರ ಕೂಲಿಗೂ ಇದು ಸಾಕಾಗುವುದಿಲ್ಲ ಎಂದು ಹೇಳುತ್ತಿರುವ ಇನ್ನು ಕೆಲ ರೈತರು ವಿಧಿಯಿಲ್ಲದೆ ತೋಟದಲ್ಲೇ ಬಿಡಲಾಗಿದೆ. ಫಲವತ್ತಾಗಿ ವ್ಯವಸಾಯ ಮಾಡಿದ್ದರಿಂದ ಹೆಚ್ಚಿನ ಇಳುವರಿ ಬಂದಿತ್ತು. ಚೆಂಡು ಹೂವಿನ ಬೆಲೆ ಇಲ್ಲದೆ ಸರಿಯಾದ ಸಮಯಕ್ಕೆ ಕಟಾವು ಮಾಡದೆ, ಚೆಂಡು ಹೂವು ಉದುರಿ ನೆಲ ಕಚ್ಚುತ್ತಿದೆ.

ಸರ್ಕಾರ ರೈತರ ಪರ ಎಂದು ಹೇಳುತ್ತದೆ. ಆದರೆ ರೈತರು ಸಂಕಷ್ಟ ಸ್ಥಿತಿಯಲ್ಲಿರುವಾಗ ಯಾವ ಸರ್ಕಾರವೂ ಸಂಬಂಧಪಟ್ಟ ಅಧಿಕಾರಿಗಳು ಸಹ ರೈತರ ಬಳಿ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತರು ಬೆಳೆದ ಚೆಂಡು ಹೂವಿಗೆ ಮಾರುಕಟ್ಟೆ ವ್ಯವಸ್ಥೆಯೇ ಇಲ್ಲ. ಆದ್ದರಿಂದ ಚೆಂಡು ಹೂವು ಮತ್ತು ಇತರೆ ಹೂವು ಬೆಳೆದ ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು, ಇಲ್ಲವೇ ಸೂಕ್ತ ಬೆಂಬಲ ಬೆಲೆ ಒದಗಿಸಬೇಕು.

ರೈತರು ನಷ್ಟ ಅನುಭವಿಸಿದರೆ, ವ್ಯಾಪಾರಿಗಳು ಮತ್ತು ಮಧ್ಯವರ್ತಿಗಳು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಆದ್ದರಿಂದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಚೆಂಡು ಹೂವು ಬೆಳೆದ ರೈತರ ನೆರವಿಗೆ ಬರಬೇಕು ಎಂದು ಬೆಳೆಗಾರರು, ಪ್ರಗತಿಪರ ರೈತರು ಮತ್ತು ರೈತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ