NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಹ್ಯಾಂಟ ವೈರಸ್‌ (Hanta virus)ನಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮೃತಪಟ್ಟ ವ್ಯಕ್ತಿ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ.

ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಅದರ ಬೆನ್ನಲೇ ಈ ಹೊಸ ವೈರಸ್‌ ಕಾಡಿಸಿಕೊಂಡಿರುವುದು ಮತ್ತೆ ಇಡೀ ಪ್ರಪಂಚವನ್ನೇ ರೋಗದ ಬಾಧೆಗೆ ಇನ್ನಷ್ಟು ನೂಕುತ್ತಿದೆ.

ಇನ್ನೂ ಕೊರೊನಾದಿಂದ ಎಚ್ಚೆತ್ತುಕೊಳ್ಳಲಾಗದೆ ಎಲ್ಲಾ ಕೆಲಸಗಳಿಗೂ ವಿರಾಮ ನೀಡಿ ಮನೆಯಿಂದ ಹೊರಬರದಿದ್ದರೂ ಬಾಧಿಸುತ್ತಿರುವ ಕೊರೊನಾದಿಂದ ವಿಶ್ವದ 180 ದೇಶದ ಜನ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹೊಸ ಹ್ಯಾಂಟ ವೈರಸ್‌ ಕಾಣಿಸಿಕೊಂಡಿದ್ದು, ಈ ವೈರಸ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಲಿಯಾಗಿದ್ದಾನೆ.

ಕೆಲಸ ನಿಮಿತ್ತ ಯುನ್ನಾನ್‌ ಪ್ರಾಂತ್ಯಂದಿದ ಶಂಡಾಂಗ್‌ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಬಸ್‌ನಲ್ಲಿ ಮೃತಪಟ್ಟಿದ್ದಾನೆ. ಈತನಿಗೆ ಇದ್ದ ವೈರಸ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ 30 ಮಂದಿ ಪ್ರಯಾಣಿಕರಿಗೂ ಈ ವೈರಸ್‌ ಸೋಂಕಿರುವ ಶಂಕೆ ವ್ಯಕ್ತವಾಗಿದೆ.

ಹ್ಯಾಂಟ (Hanta virus) ವೈರಸ್‌ ಸಾಮಾನ್ಯವಾಗಿ ಇಲಿಯಿಂದ ಬರುತ್ತದೆ ಎಂದು ವೈದ್ಯರು ಹೇಳಿದ್ದು, ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದರೆ ಇಲಿಗಳ ಮಲ ಮೂತ್ರ ಲಾಲಾರಸ ಸ್ಪರ್ಶಿಸಿ ನಂತರ ಕಣ್ಣು, ಕಿವಿ, ಮೂಗು, ಬಾಯಿ ಮುಟ್ಟಿಕೊಂಡರೆ ಬರುತ್ತದೆ ಎಂದು ತಿಳಿಸಿದ್ದಾರೆ.

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ಸೆಳೆತ, ಹೊಟ್ಟೆನೋವು,ತಲೆತಿರುಗುವಿಕೆ , ಶೀತ, ವಾಕರಿಕೆ ಮತ್ತು ವಾಂತಿ ಇತರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ನಂತರದ ದಿನಗಳಲ್ಲಿ ಉಸಿರಾಟದ ತೊಂದರೆ, ಶ್ವಾಸಕೋಶಕ್ಕೆ ನೀರು ತುಂಬಿಕೊಳ್ಳುವುದು. ಇದನ್ನು ಆರಂಭದಲ್ಲೇ ನಿವಾರಿಸಲು ಸಾಧ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದರ ಜತೆಗೆ ಇದನ್ನು ಆರಂಭದಲ್ಲಿ ನಿಖರವಾಗಿ ಪತ್ತೆಹಚ್ಚುವ ಕೆಲಸ ಆಗಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ