NEWSನಮ್ಮರಾಜ್ಯರಾಜಕೀಯ

ಚುನಾವಣೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಮ್ಮ ಜನ್ಮದಿನದಂದೇ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿರುವ  ಹಾಲಿ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಆ.6 (ಇಂದು) ಅವರ ಜನ್ಮದಿನ. ಈ ಹೊತ್ತಲೇ ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ವಯಂ ಘೋಷಣೆ ಮಾಡುವ ಮೂಲಕ ಈ ಮಹತ್ತರ ಹೇಳಿಕೆ ನೀಡಿದ್ದಾರೆ.

ಇನ್ನು ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜ್ಯದಲ್ಲಿ ಅಂದು ಸಂಭವಿಸಿದ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್​ ಪಕ್ಷದಲ್ಲಿ ಸಿದ್ಧರಾಮಯ್ಯ ಹಾಗೂ ಮತ್ತಿತರರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು. ಆ ಗೆಲುವು ಅವರಿಗೆ ಮಹತ್ವದ್ದೂ ಆಗಿತ್ತು. ಆದರೆ, ಇಂದು ಇನ್ನುಮುಂದೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಆತ್ಮತೃಪ್ತಿಯ ನಿವೃತ್ತಿ
ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. 50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳು ದಾಖಲಿಸಿದ್ದೇನೆ. ಇನ್ನು ನಿವೃತ್ತಿ ಘೋಷಿಸುತ್ತಲೇ ಇದು ನನ್ನ ಅಂತಿಮ ನಿಲುವು ಎಂಬುದನ್ನೂ ತಿಳಿಸಿರುವ ಶ್ರೀನಿವಾಸ ಪ್ರಸಾದ್, ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಂಸದರ ಮನೆಗೆ ಶಾಸಕ‌ ಮಹೇಶ್ ಭೇಟಿ
ಬಿಎಸ್​ಪಿಯಿಂದ ಉಚ್ಚಾಟಿತಗೊಂಡಿದ್ದ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌ ನಿನ್ನೆಯಷ್ಟೇ ಬಿಜೆಪಿ ಸೇರಿದ್ದು, ಇಂದು ಜಯಲಕ್ಷ್ಮಿಪುರಂನಲ್ಲಿರುವ ಸಂಸದ ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು