NEWSನಮ್ಮರಾಜ್ಯರಾಜಕೀಯ

ಚಾಮರಾಜನಗರ ಬಿಜೆಪಿ ಮುಖಂಡರಿಂದಲೇ ಸಚಿವ ಸೋಮಣ್ಣಗೆ ಗೋ ಬ್ಯಾಕ್‌ ಚಳವಳಿಯ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಸಚಿವ ವಿ. ಸೋಮಣ್ಣಗೆ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಿರುವುದಕ್ಕೆ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದು, ಸೋಮಣ್ಣಗೆ ಟಿಕೆಟ್, ಉಸ್ತುವಾರಿ ಬೇಡ ಗೋ ಬ್ಯಾಕ್‌ ಸೋಮಣ್ಣ ಎಂದು ಆಗ್ರಹಿಸಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು “ಗೋ ಬ್ಯಾಕ್ ಸೋಮಣ್ಣ” ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಚಿವ ವಿ. ಸೋಮಣ್ಣಗೆ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ “ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸಲಾಗುವುದು. ಜತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದರಿಂದ ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಫೋಟಗೊಂಡಿದೆ.

ಹನೂರು, ಚಾಮರಾಜನಗರ ಸೇರಿದಂತೆ ಕಾಂಗ್ರೆಸ್ ಶಾಸಕರನ್ನು ಹಾಡಿ ಹೊಗಳುತ್ತಾರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಕ್ಕೆ ಗೈರಾಗಿ ಪಕ್ಷದ ಸಂಘಟನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕಾಂಗ್ರೆಸ್ ಸೇರುತ್ತೇನೆಂದು ವರಿಷ್ಠರಿಗೆ ಬೆದರಿಕೆ ಒಡ್ಡುವ ತಂತ್ರವನ್ನು ಪ್ರಯೋಗಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸೋಮಣ್ಣ ಜಿಲ್ಲಾ ಉಸ್ತುವಾರಿ ಆದ ಬಳಿಕ ಪಕ್ಷದ ಸಂಘಟನೆಯಲ್ಲಿ ತೊಡಗಿಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲೂ ಕೆಲಸ ಮಾಡಿಲ್ಲ, 2018 ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾದರು. ಅವರಿಂದ ಪಕ್ಷಕ್ಕೆ ಯಾವುದೇ ಅನೂಕೂಲವಾಗಿಲ್ಲ. ಇದನ್ನೆಲ್ಲ ಗಮನಿಸಿ ಚುನಾವಣಾ ಉಸ್ತುವಾರಿ ಕೊಡಬಾರದು ಎಂದು ಆಗ್ರಹಿಸಿದರು.

ಇದೇ ವೇಳೆ, ಚಾಮರಾಜನಗರ ಚುನಾವಣಾ ಉಸ್ತುವಾರಿಯಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಬೇಕು. ಯಡಿಯೂರಪ್ಪ ಅವರು ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಪ್ರಚಾರ ನಡೆಸಬೇಕು. ಚಾಮರಾಜನಗರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ ಎಂದು ಬಿಎಸ್‌ವೈ ಹಾಗೂ ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ.

ಒಟ್ಟಿನಲ್ಲಿ ಇನ್ನೂ ಕೂಡ ಬಿಜೆಪಿಯಲ್ಲಿ ಬಿಎಸ್‌ವೈ v/s ವಿ.ಸೋಮಣ್ಣ ಪರಿಸ್ಥಿತಿ ಇದೆ ಎಂಬುದನ್ನು ಇಂದಿನ ಸುದ್ದಿಗೋಷ್ಠಿ ಮತ್ತೊಮ್ಮೆ ಸಾಕ್ಷೀಕರಿಸಿದೆ. ಜತೆಗೆ, ಭಾರತೀಯ ಜನತಾ ಪಕ್ಷದ ಲೆಟರ್ ಹೆಡ್ ನಲ್ಲೇ ಸುದ್ದಿಗೋಷ್ಠಿಗೆ ಆಹ್ವಾನಿಸಿದ್ದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಂತೆ ಇದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು