NEWSಬೆಂಗಳೂರುರಾಜಕೀಯ

ಚಾಮರಾಜನಗರ, ವರುಣಾ ಎರಡೂ ಕ್ಷೇತ್ರದಲ್ಲಿ ಸೋತ ಸೋಮಣ್ಣ: ಲಿಂಗಾಯತ ನಾಯಕನಿಗೆ ಬಿಜೆಪಿ ಕೊನೆ ಮೊಳೆ ಹೊಡೆಯಿತಾ?

ಫುಟ್ಟರಂಗಶೆಟ್ಟಿ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ತೀವ್ರ ಕುತೂಹಲ ಮೂಡಿಸಿರುವ ಚಾಮರಾಜನಗರ ವಿಧಾನಸಭಾ ಚುನಾವಣೆ ಫಲಿತಾಂಶದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಗೆಲುವು ಸಾಧಿಸಿದ್ದಾರೆ.

ಅವರ ಪ್ರತಿಸ್ಪರ್ಧಿಯಾಗಿದ್ದ  ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸೋಲು ಅನುಭವಿಸುವ ಮೂಲಕ ತೀವ್ರ ಮುಖಭಂಗವಾಗಿದೆ.   ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲು ಕಂಡಿದ್ದು, ಈ ಮೂಲಕ ಲಿಂಗಾಯತ ನಾಯಕನಿಗೆ ಬಿಜೆಪಿ ಕೊನೆ ಮೊಳೆ ಹೊಡೆಯಿತಾ ಎಂಬ ಪ್ರಶ್ನೆ ಕಾಡುತ್ತಿದೆ.

ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಹತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ವಿ.ಸೋಮಣ್ಣ ಚಾಮರಾಜನಗರ ಹಾಗೂ ವರುಣಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣಗೆ ಮುಖಭಂಗವಾಗಿದೆ.

ಇನ್ನು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದು, ವಿ.ಸೋಮಣ್ಣ ಹಿನ್ನಡೆಯಲ್ಲಿದ್ದಾರೆ.

ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗರಾದ ಸಿ.ಪುಟ್ಟರಂಗಶೆಟ್ಟಿ ತಾವು ಸೋಲಿಲ್ಲದ ಸರದಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಸುಮಾರು ಹತ್ತೊಂಬತ್ತು ಹಂತದಲ್ಲಿ ನಡೆದ ಮತ ಎಣಿಕೆಯಲ್ಲಿ 7,383 ಮತ ಅಂತರದಲ್ಲಿ ಸಿ‌.ಪುಟ್ಟರಂಗಶೆಟ್ಟಿಗೆ ಜಯ ಸಾಧಿಸಿದ್ದು, ಸಿ.ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ವಿ.ಸೋಮಣ್ಣ 75,753 ಮತಗಳನ್ನು ಪಡೆದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು