CrimeNEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಕೆರೆಬಿದ್ದ ಕಾರು: ಒಬ್ಬ ಮೃತ, ಮತ್ತೊಬ್ಬ ಪಾರು

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಮೇಲೆ ಬರಲಾಗದೆ ದಿನೇಶ್ (33) ಎಂಬುವರು ಅಂಬಳೆ ಕೆರೆಯಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಗುರುವಾರ ಬೆಳಗ್ಗಿನ ಜಾವ ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ದಿನೇಶ್‌ ಮತ್ತು ​​ ಸಂತೋಷ್  ಇಬ್ಬರು ಕಾರಿನಲ್ಲಿ  ಹೋಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್​ ಕಾರಿನೊಳಗೆ ಕೊನೆಯುಸಿರೆಳೆದಿದ್ದಾರೆ.

ದಿನೇಶ್ ಹಾಗೂ ಸಂತೋಷ್ ಅಂಬಳೆ ಗ್ರಾಮದವರಾಗಿದ್ದು, ದಿನೇಶ್‌ಗೆ​​ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ಇತ್ತು. ಅಲ್ಲೇ ವ್ಯಾಪಾರ ಮಾಡಿಕೊಂಡಿದ್ದರು. ಈ ನಡುವೆ ಇಂದು ಗ್ರಾಮಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ದಿನೇಶ್‌​ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು