Please assign a menu to the primary menu location under menu

NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಹ್ಯಾಂಟ ವೈರಸ್‌ (Hanta virus)ನಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮೃತಪಟ್ಟ ವ್ಯಕ್ತಿ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ.

ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಅದರ ಬೆನ್ನಲೇ ಈ ಹೊಸ ವೈರಸ್‌ ಕಾಡಿಸಿಕೊಂಡಿರುವುದು ಮತ್ತೆ ಇಡೀ ಪ್ರಪಂಚವನ್ನೇ ರೋಗದ ಬಾಧೆಗೆ ಇನ್ನಷ್ಟು ನೂಕುತ್ತಿದೆ.

ಇನ್ನೂ ಕೊರೊನಾದಿಂದ ಎಚ್ಚೆತ್ತುಕೊಳ್ಳಲಾಗದೆ ಎಲ್ಲಾ ಕೆಲಸಗಳಿಗೂ ವಿರಾಮ ನೀಡಿ ಮನೆಯಿಂದ ಹೊರಬರದಿದ್ದರೂ ಬಾಧಿಸುತ್ತಿರುವ ಕೊರೊನಾದಿಂದ ವಿಶ್ವದ 180 ದೇಶದ ಜನ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹೊಸ ಹ್ಯಾಂಟ ವೈರಸ್‌ ಕಾಣಿಸಿಕೊಂಡಿದ್ದು, ಈ ವೈರಸ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಲಿಯಾಗಿದ್ದಾನೆ.

ಕೆಲಸ ನಿಮಿತ್ತ ಯುನ್ನಾನ್‌ ಪ್ರಾಂತ್ಯಂದಿದ ಶಂಡಾಂಗ್‌ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಬಸ್‌ನಲ್ಲಿ ಮೃತಪಟ್ಟಿದ್ದಾನೆ. ಈತನಿಗೆ ಇದ್ದ ವೈರಸ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ 30 ಮಂದಿ ಪ್ರಯಾಣಿಕರಿಗೂ ಈ ವೈರಸ್‌ ಸೋಂಕಿರುವ ಶಂಕೆ ವ್ಯಕ್ತವಾಗಿದೆ.

ಹ್ಯಾಂಟ (Hanta virus) ವೈರಸ್‌ ಸಾಮಾನ್ಯವಾಗಿ ಇಲಿಯಿಂದ ಬರುತ್ತದೆ ಎಂದು ವೈದ್ಯರು ಹೇಳಿದ್ದು, ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದರೆ ಇಲಿಗಳ ಮಲ ಮೂತ್ರ ಲಾಲಾರಸ ಸ್ಪರ್ಶಿಸಿ ನಂತರ ಕಣ್ಣು, ಕಿವಿ, ಮೂಗು, ಬಾಯಿ ಮುಟ್ಟಿಕೊಂಡರೆ ಬರುತ್ತದೆ ಎಂದು ತಿಳಿಸಿದ್ದಾರೆ.

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ಸೆಳೆತ, ಹೊಟ್ಟೆನೋವು,ತಲೆತಿರುಗುವಿಕೆ , ಶೀತ, ವಾಕರಿಕೆ ಮತ್ತು ವಾಂತಿ ಇತರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ನಂತರದ ದಿನಗಳಲ್ಲಿ ಉಸಿರಾಟದ ತೊಂದರೆ, ಶ್ವಾಸಕೋಶಕ್ಕೆ ನೀರು ತುಂಬಿಕೊಳ್ಳುವುದು. ಇದನ್ನು ಆರಂಭದಲ್ಲೇ ನಿವಾರಿಸಲು ಸಾಧ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದರ ಜತೆಗೆ ಇದನ್ನು ಆರಂಭದಲ್ಲಿ ನಿಖರವಾಗಿ ಪತ್ತೆಹಚ್ಚುವ ಕೆಲಸ ಆಗಬೇಕಿದೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ