NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಹ್ಯಾಂಟ ವೈರಸ್‌ (Hanta virus)ನಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮೃತಪಟ್ಟ ವ್ಯಕ್ತಿ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ.

ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಅದರ ಬೆನ್ನಲೇ ಈ ಹೊಸ ವೈರಸ್‌ ಕಾಡಿಸಿಕೊಂಡಿರುವುದು ಮತ್ತೆ ಇಡೀ ಪ್ರಪಂಚವನ್ನೇ ರೋಗದ ಬಾಧೆಗೆ ಇನ್ನಷ್ಟು ನೂಕುತ್ತಿದೆ.

ಇನ್ನೂ ಕೊರೊನಾದಿಂದ ಎಚ್ಚೆತ್ತುಕೊಳ್ಳಲಾಗದೆ ಎಲ್ಲಾ ಕೆಲಸಗಳಿಗೂ ವಿರಾಮ ನೀಡಿ ಮನೆಯಿಂದ ಹೊರಬರದಿದ್ದರೂ ಬಾಧಿಸುತ್ತಿರುವ ಕೊರೊನಾದಿಂದ ವಿಶ್ವದ 180 ದೇಶದ ಜನ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹೊಸ ಹ್ಯಾಂಟ ವೈರಸ್‌ ಕಾಣಿಸಿಕೊಂಡಿದ್ದು, ಈ ವೈರಸ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಲಿಯಾಗಿದ್ದಾನೆ.

ಕೆಲಸ ನಿಮಿತ್ತ ಯುನ್ನಾನ್‌ ಪ್ರಾಂತ್ಯಂದಿದ ಶಂಡಾಂಗ್‌ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಬಸ್‌ನಲ್ಲಿ ಮೃತಪಟ್ಟಿದ್ದಾನೆ. ಈತನಿಗೆ ಇದ್ದ ವೈರಸ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ 30 ಮಂದಿ ಪ್ರಯಾಣಿಕರಿಗೂ ಈ ವೈರಸ್‌ ಸೋಂಕಿರುವ ಶಂಕೆ ವ್ಯಕ್ತವಾಗಿದೆ.

ಹ್ಯಾಂಟ (Hanta virus) ವೈರಸ್‌ ಸಾಮಾನ್ಯವಾಗಿ ಇಲಿಯಿಂದ ಬರುತ್ತದೆ ಎಂದು ವೈದ್ಯರು ಹೇಳಿದ್ದು, ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದರೆ ಇಲಿಗಳ ಮಲ ಮೂತ್ರ ಲಾಲಾರಸ ಸ್ಪರ್ಶಿಸಿ ನಂತರ ಕಣ್ಣು, ಕಿವಿ, ಮೂಗು, ಬಾಯಿ ಮುಟ್ಟಿಕೊಂಡರೆ ಬರುತ್ತದೆ ಎಂದು ತಿಳಿಸಿದ್ದಾರೆ.

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ಸೆಳೆತ, ಹೊಟ್ಟೆನೋವು,ತಲೆತಿರುಗುವಿಕೆ , ಶೀತ, ವಾಕರಿಕೆ ಮತ್ತು ವಾಂತಿ ಇತರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ನಂತರದ ದಿನಗಳಲ್ಲಿ ಉಸಿರಾಟದ ತೊಂದರೆ, ಶ್ವಾಸಕೋಶಕ್ಕೆ ನೀರು ತುಂಬಿಕೊಳ್ಳುವುದು. ಇದನ್ನು ಆರಂಭದಲ್ಲೇ ನಿವಾರಿಸಲು ಸಾಧ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದರ ಜತೆಗೆ ಇದನ್ನು ಆರಂಭದಲ್ಲಿ ನಿಖರವಾಗಿ ಪತ್ತೆಹಚ್ಚುವ ಕೆಲಸ ಆಗಬೇಕಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...