NEWSಕೃಷಿನಮ್ಮಜಿಲ್ಲೆ

ಚೆಕ್ ಫೋಸ್ಟ್‌ಗಳಲ್ಲಿ ರೈತರ ತಡೆದರೆ ಕ್ರಮ

ಅಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರುವ ವೇಳೆ ಯಾವುದೇ ಚೆಕ್‌ಫೋಸ್ಟ್‌ಗಳಲ್ಲಾದರೂ ಅವರನ್ನು ತಡೆದರೆ ಅಂಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹತ್ತಿ ಮಾರುಕಟ್ಟೆ, ಕಡಲೆ ಖರೀದಿ ಕೇಂದ್ರ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಪರಿಶೀಲನೆ ವೇಳೆ ಮಾತನಾಡಿದರು.

ರೈತರು ಯಾವುದೇ ಬೆಳೆ ಬೆಳೆಯಲಿ, ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಯಾವುದೇ ರೀತಿಯ ಸಮಸ್ಯೆಯಾಗಬಾರದು. ಮಾರುಕಟ್ಟೆಗೆ ಆಗಮಿಸುವ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಪ್ರತಿಯೊಬ್ಬರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ನಡೆಸಬೇಕು ಎಂದರು.

ಊಟೋಪಾಚಾರ ವ್ಯವಸ್ಥೆ; ಎಪಿಎಂಸಿ ಬರುವ ರೈತರು ಹಾಗೂ ಹಮಾಲರಿಗೆ ಉಪಾಹಾರ, ಊಟದ ವ್ಯವಸ್ಥೆಯನ್ನು ಮಾಡಬೇಕು. ಕ್ಯಾಂಟಿನ್ ತೆರೆದು ಇಲ್ಲಿ ಪಾರ್ಸಲ್ ವ್ಯವಸ್ಥೆ ಮಾಡಿ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ತಿಳಿಸಿ ಕ್ಯಾಂಟಿನ್ ತೆರೆಯದಿದ್ದಲ್ಲಿ ಸಮಿತಿಯಿಂದ ಪಾರ್ಸಲ್ ವ್ಯವಸ್ಥೆ ಮಾಡಲು ಸೂಚಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಚಿತ್ರದುರ್ಗ ಎಪಿಎಂಸಿಗೆ 02 ಕೋಲ್ಡ್ ಸ್ಟೋರೆಜ್ ಹಾಗೂ ಶಾಸಕ ಟಿ.ರಘುಮೂರ್ತಿ  ಚಳ್ಳಕೆರೆಗೆ 01 ಕೋಲ್ಡ್ ಸ್ಟೋರೇಜ್ ಅಳವಡಿಕೆ ಮಾಡುವಂತೆ ಮನವಿ ಮಾಡಿದ್ದು, ಅಗತ್ಯವಿರುವ ಕಡೆ ಕೋಲ್ಡ್ ಸ್ಟೋರೇಜ್ ಅಳವಡಿಕೆಗೆ ಪ್ರಸ್ತಾವನೆ ಕಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹೊಸ ಸಾಲ ವಿತರಣೆಗೆ ಕ್ರಮ

ಪೂರ್ವ ಮುಂಗಾರು ಹಂಗಾಮು ಆರಂಭವಾಗಿದ್ದು ಬಿತ್ತನೆ ಚಟುವಟಿಕೆಗಳು ಆರಂಭಿಕ ಹಂತದಲ್ಲಿರುವುದರಿAದ ಏಪ್ರಿಲ್ ತಿಂಗಳಿAದನಿAದಲೇ ನಿಯಾಮಾನುಸಾರ ಹೊಸ ಸಾಲ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಸಹಕಾರ ಸಂಸ್ಥೆಗಳ ಮೂಲಕ ಕಳೆದ ವರ್ಷ 13 ಸಾವಿರ ಕೋಟಿ ಸಾಲ ನೀಡಲಾಗಿದ್ದು ಈ ಬಾರಿಯು ಅಷ್ಟೇ ಪ್ರಮಾಣದ ಸಾಲವನ್ನು ನೀಡಲು ತೀರ್ಮಾನಿಸಲಾಗಿದೆ. ಲಾಕ್ ಡೌನ್ ಇರುವ ಕಾರಣದಿಂದಾಗಿ ಜೂನ್ ವರೆಗೆ ಹಳೆ ಸಾಲ ಕಟ್ಟಲು ಸಮಯ ನಿಗದಿಪಡಿಸಲಾಗಿದೆ.  ಜೂನ್ ತಿಂಗಳಿಗಿಂತ ಮುಂಚಿತವಾಗಿ ಯಾರು ಮೊದಲು ಸಾಲ ಕಟ್ಟುತ್ತಾರೋ ಅವರಿಗೆ ಸಾಲದ ನವೀಕರಣ, ಹೊಸ ಸಾಲ ನೀಡಲಾಗುವುದು ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಸಹಕಾರ ಸಂಘದ ನಿರ್ದೇಶಕ ಎಸ್.ಆರ್.ಗಿರೀಶ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಟಿ.ಎ.ಮಹೇಶ್ ಸಿಬ್ಬಂದಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್