Please assign a menu to the primary menu location under menu

NEWSಕೃಷಿನಮ್ಮಜಿಲ್ಲೆ

ಚೆಕ್ ಫೋಸ್ಟ್‌ಗಳಲ್ಲಿ ರೈತರ ತಡೆದರೆ ಕ್ರಮ

ಅಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ರೈತರು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತರುವ ವೇಳೆ ಯಾವುದೇ ಚೆಕ್‌ಫೋಸ್ಟ್‌ಗಳಲ್ಲಾದರೂ ಅವರನ್ನು ತಡೆದರೆ ಅಂಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಇಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹತ್ತಿ ಮಾರುಕಟ್ಟೆ, ಕಡಲೆ ಖರೀದಿ ಕೇಂದ್ರ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಪರಿಶೀಲನೆ ವೇಳೆ ಮಾತನಾಡಿದರು.

ರೈತರು ಯಾವುದೇ ಬೆಳೆ ಬೆಳೆಯಲಿ, ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಯಾವುದೇ ರೀತಿಯ ಸಮಸ್ಯೆಯಾಗಬಾರದು. ಮಾರುಕಟ್ಟೆಗೆ ಆಗಮಿಸುವ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಪ್ರತಿಯೊಬ್ಬರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹಾರ ನಡೆಸಬೇಕು ಎಂದರು.

ಊಟೋಪಾಚಾರ ವ್ಯವಸ್ಥೆ; ಎಪಿಎಂಸಿ ಬರುವ ರೈತರು ಹಾಗೂ ಹಮಾಲರಿಗೆ ಉಪಾಹಾರ, ಊಟದ ವ್ಯವಸ್ಥೆಯನ್ನು ಮಾಡಬೇಕು. ಕ್ಯಾಂಟಿನ್ ತೆರೆದು ಇಲ್ಲಿ ಪಾರ್ಸಲ್ ವ್ಯವಸ್ಥೆ ಮಾಡಿ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ತಿಳಿಸಿ ಕ್ಯಾಂಟಿನ್ ತೆರೆಯದಿದ್ದಲ್ಲಿ ಸಮಿತಿಯಿಂದ ಪಾರ್ಸಲ್ ವ್ಯವಸ್ಥೆ ಮಾಡಲು ಸೂಚಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಚಿತ್ರದುರ್ಗ ಎಪಿಎಂಸಿಗೆ 02 ಕೋಲ್ಡ್ ಸ್ಟೋರೆಜ್ ಹಾಗೂ ಶಾಸಕ ಟಿ.ರಘುಮೂರ್ತಿ  ಚಳ್ಳಕೆರೆಗೆ 01 ಕೋಲ್ಡ್ ಸ್ಟೋರೇಜ್ ಅಳವಡಿಕೆ ಮಾಡುವಂತೆ ಮನವಿ ಮಾಡಿದ್ದು, ಅಗತ್ಯವಿರುವ ಕಡೆ ಕೋಲ್ಡ್ ಸ್ಟೋರೇಜ್ ಅಳವಡಿಕೆಗೆ ಪ್ರಸ್ತಾವನೆ ಕಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಹೊಸ ಸಾಲ ವಿತರಣೆಗೆ ಕ್ರಮ

ಪೂರ್ವ ಮುಂಗಾರು ಹಂಗಾಮು ಆರಂಭವಾಗಿದ್ದು ಬಿತ್ತನೆ ಚಟುವಟಿಕೆಗಳು ಆರಂಭಿಕ ಹಂತದಲ್ಲಿರುವುದರಿAದ ಏಪ್ರಿಲ್ ತಿಂಗಳಿAದನಿAದಲೇ ನಿಯಾಮಾನುಸಾರ ಹೊಸ ಸಾಲ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಸಹಕಾರ ಸಂಸ್ಥೆಗಳ ಮೂಲಕ ಕಳೆದ ವರ್ಷ 13 ಸಾವಿರ ಕೋಟಿ ಸಾಲ ನೀಡಲಾಗಿದ್ದು ಈ ಬಾರಿಯು ಅಷ್ಟೇ ಪ್ರಮಾಣದ ಸಾಲವನ್ನು ನೀಡಲು ತೀರ್ಮಾನಿಸಲಾಗಿದೆ. ಲಾಕ್ ಡೌನ್ ಇರುವ ಕಾರಣದಿಂದಾಗಿ ಜೂನ್ ವರೆಗೆ ಹಳೆ ಸಾಲ ಕಟ್ಟಲು ಸಮಯ ನಿಗದಿಪಡಿಸಲಾಗಿದೆ.  ಜೂನ್ ತಿಂಗಳಿಗಿಂತ ಮುಂಚಿತವಾಗಿ ಯಾರು ಮೊದಲು ಸಾಲ ಕಟ್ಟುತ್ತಾರೋ ಅವರಿಗೆ ಸಾಲದ ನವೀಕರಣ, ಹೊಸ ಸಾಲ ನೀಡಲಾಗುವುದು ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಸಹಕಾರ ಸಂಘದ ನಿರ್ದೇಶಕ ಎಸ್.ಆರ್.ಗಿರೀಶ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಟಿ.ಎ.ಮಹೇಶ್ ಸಿಬ್ಬಂದಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ