NEWSನಮ್ಮರಾಜ್ಯ

ಜನತಾ ದಾಸೋಹ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಹಸಿದವರಿಗೆ ಅನ್ನ ನೀಡಲು ಮುಂದಾದ ಜೆಡಿಎಸ್‌ ಮುಖಂಡರು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ವಿಶ್ವಮಾರಿ ಕೊರೊನಾದಿಂದ ದೇಶದಲ್ಲಿ ಉಂಟಾಗಿರುವ ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ ತುತ್ತಿನ ಚೀಲ ತುಂಬಿಸಲು ಮಾಜಿ ಮುಖ್ಯ ಮಂತ್ರಿ   ಎಚ್‌.ಡಿ. ಕುಮಾರಸ್ವಾಮಿ ಜನತಾ ದಾಸೋಹ ಕಾರ್ಯ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ನಿತ್ಯ ಆಹಾರ ನೀಡಲು  ಸಿದ್ಧವಾಗಿರುವ ಎಚ್‌ಡಿಕೆ ಜನತಾ ದಾಸೋಹದ ಮೂಲಕ ಹಸಿವು ನೀಗಿಸುತ್ತಿದ್ದಾರೆ. ಅಲ್ಲದೆ ಇದೇ ರೀತಿ ನಿಮ್ಮ ನಿಮ್ಮ ಕ್ಷೇತ್ರ ವ್ಯಾಪ್ತಿಗಳಲ್ಲಿ ಮಾಡಬೇಕು ಎಂದು ತಮ್ಮ ಪಕ್ಷದ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ತಲಾ ಒಂದು ಸಾವಿರ ಮಂದಿಗೆ ಭೋಜನೆ ವ್ಯವಸ್ಥೆ ಮಾಡುವ ಗುರಿಯನ್ನು ಹೊಂದಲಾಗಿದ್ದು ಆರಂಭದಲ್ಲಿ ರಾಮನಗರ, ಚನ್ನಪಟ್ಟಣದಲ್ಲಿ ದಾಸೋಹವನ್ನು ನಡೆಸಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಉಂಟಾಗುತ್ತಿರುವ ಸಮಸ್ಯೆ ಸಮಗ್ರ ಮಾಹಿತಿ  ಪಡೆಯಲು ಕುಮಾರಸ್ವಾಮಿ ಅವರು ಮಂಡ್ಯ, ರಾಮನಗರ, ಚನ್ನಪಟ್ಟಣದ ಪಕ್ಷದ ಮುಖಂಡರ ಜತೆ ಸಮಾಲೋಚನಾಸಭೆಯನ್ನು ಕಳೆದ ಎರಡು ದಿನದ ಹಿಂದೆ ನಡೆಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಸಮರದಲ್ಲಿ ಅನ್ನದಾತರ  ಸಂಕಷ್ಟವನ್ನು ಕಡೆಗಣಿಸದಂತೆ ರಾಜ್ಯ ಸರಕಾರವನ್ನು ಎಚ್ಚರಿಸಿರುವ ಕುಮಾರಸ್ವಾಮಿ ರೈತರಿಗೆ ಎಲ್ಲಾರೀತಿಯ ವ್ಯವಸ್ಥೆ ಮಾಡಿಕೊಡಬೇಕು. ಪ್ರಸ್ತುತ ಕಟಾವಿಗೆ ಬಂದಿರುವ ಫಸಲನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ನಿವಾಸಿಗಳಿಗೆ ನಿತ್ಯದ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡಲು  ಸಹ ಕುಮಾರಸ್ವಾಮಿ ನಿರ್ಧರಿಸಿದ್ದು, ಅದಕ್ಕಾಗಿ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

 

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...