CrimeNEWSನಮ್ಮಜಿಲ್ಲೆ

ಜನರ ಓಡಾಟದ ನಡುವೆಯೇ ಯುವತಿ ಹೊತ್ತೊಯ್ದು 8ಗಂಟೆ ಅತ್ಯಾಚಾರ ವೆಸಗಿದ ಕಾಮುಕರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿ ಯುವತಿಯರಿಗೆ ಸೇಫ್ ಅಲ್ಲ ಎನ್ನುವುದು ಪದೇಪದೆ ಸಾಬೀತಾಗುತ್ತಿದೆ. ಜನರ ಓಡಾಟದ ನಡುವೆಯೇ ಯುವತಿಯನ್ನು ಕಾಮುಕರು ಹೊತ್ತೊಯ್ದು ರಾತ್ರಿ ಕಾರಿನಲ್ಲಿ ಅತ್ಯಾಚಾರ ಎಸಗಿ ಮುಂಜಾನೆ ರಸ್ತೆ ನಡುವೆ ಬಿಟ್ಟು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ವರದಿಗಳ ಪ್ರಕಾರ ಮಾರ್ಚ್ 25 ರಂದು ಯುವತಿ ತನ್ನ ಸ್ನೇಹಿತನ ಜತೆ ನ್ಯಾಷನಲ್ ಗೇಮ್ಸ್ ವಿಲೇಜ್ ಕಾಂಪ್ಲೆಕ್ಸ್ ಪಾರ್ಕ್‌ನಲ್ಲಿ ಕೂತು ಮಾತನಾಡುತ್ತಿದ್ದಳು. ಆಗ ಕಾಮುಕರ ಗ್ಯಾಂಗ್ ಪಾರ್ಕ್ ಬಳಿ ಬಂದು ಕಿರಿಕ್ ಮಾಡಿದ್ದಾರೆ. ಬಳಿಕ ಯುವತಿಯನ್ನು ಹೊತ್ತೊಯ್ದು ಮಾರುತಿ 800 ಕಾರಿನಲ್ಲಿ ಸುಮಾರು 8 ಗಂಟೆಗಳ ಕಾಲ ಸುತ್ತಾಡಿಸಿದ್ದು,  ಈ ವೇಳೆ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. ಕಾಮಾಂದರ ಕ್ರೌರ್ಯಕ್ಕೆ ಕಾರಿನ ಸೀಟ್ ಕೂಡ ಚಿಂದಿ ಚಿಂದಿಯಾಗಿದೆ.

ಕೋರಮಂಗಲದ ಎನ್‌ಜಿವಿ ಕಾಂಪ್ಲೆಕ್ಸ್ ಪಾರ್ಕ್‌ನಿಂದ ಹೊರಟ ಕಾಮುಕರು ದೊಮ್ಮಲೂರು, ಇಂದಿರಾನಗರ, ಅನೇಕಲ್, ನೈಸ್ ರೋಡ್ ಹೀಗೆ 60 ಕಿ.ಮೀ ಸುತ್ತಾಡಿ, ದಾರಿ ಉದ್ದಕ್ಕೂ ಸಂತ್ರಸ್ತೆಯ ಮೇಲೆ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ. ಸತತ 8 ಗಂಟೆಗಳ ಕಾಲ ಕಾಮುಕರ ಅಟ್ಟಹಾಸಕ್ಕೆ ತುತ್ತಾಗಿರುವ ಸಂತ್ರಸ್ತೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೆಡ್ ರೆಸ್ಟ್‌ನಲ್ಲಿದ್ದಾಳೆ ಎನ್ನಲಾಗಿದೆ.

ಘಟನೆಯ 2 ದಿನದ ಬಳಿಕ ಯುವತಿ ಸುಧಾರಿಸಿಕೊಂಡು ಕೋರಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಆಧಾರದ ಮೇಲೆ ಆರೋಪಿಗಳಿಗೆ ಬಲೆ ಬೀಸಿದ್ದ ಪೊಲೀಸರು ಎರಡೇ ದಿನದಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.

ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವರೆ ಬಂಧಿತ ಆರೋಪಿಗಳಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಎಲ್ಲ ಆರೋಪಿಗಳು ಒಂದೇ ಏರಿಯಾದವರಾಗಿದ್ದು ಪರಿಚಯಸ್ಥರಾಗಿದ್ದಾರೆ ಎನ್ನಲಾಗಿದೆ. ಸದ್ಯ ಬಂಧಿತರು ಕೋರಮಂಗಲ ಪೊಲೀಸರ ಕಸ್ಟಡಿಯಲ್ಲಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು