NEWSಸಿನಿಪಥ

ಜನ-ಮನಗಳಲ್ಲಿ ಚೈತನ್ಯ ತುಂಬಿದ ಡಾ.ರಾಜ್‌ ನೆನಪು

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಾ. ರಾಜಕುಮಾರ್  ಕನ್ನಡದ ಸಾಂಸ್ಕೃತಿಕ ಪ್ರತಿನಿಧಿ, ಈ ಕೋವಿಡ್ ಲಾಕ್‍ಡೌನ್ ಸಮಯದಲ್ಲೂ ಸಹ ಅವರ ಜಯಂತಿ ನೆನಪು ಜನ-ಮನಗಳಲ್ಲಿ ಚೈತನ್ಯವನ್ನು ತುಂಬಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದರು.

ಕೋವಿಡ್ -19 ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಕನ್ನಡದ ವರನಟ ಡಾ: ರಾಜ್‍ಕುಮಾರ್ ಅವರ 92 ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಡಾ.ರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು ಪ್ರತಿಯೊಬ್ಬರಲ್ಲೂ ಒಂದೇ ತೆರನಾಗಿ ಕಾಣುವ ವ್ಯಕ್ತಿತ್ವ  ಡಾ. ರಾಜ್‍ಕುಮಾರ್ ಅವರದ್ದು ಎಂದು ಅವರ ಒಡನಾಟವನ್ನು ಸ್ಮರಿಸಿಕೊಂಡರು.

ಕರ್ನಾಟಕವನ್ನು ಪ್ರತಿನಿಧಿಸುವ ಏಕೈಕ ಕಲಾವಿದರೆಂದರೆ ಅದು ರಾಜ್‍ಕುಮಾರ್ ಮಾತ್ರ, ಅವರ ಪ್ರತಿ ನಡೆ-ನುಡಿ ಇತರರಿಗೆ ಮಾರ್ಗದರ್ಶನವಾಗಿತ್ತು. ಅವರು ಕೇವಲ ಒಬ್ಬ ಕಲಾವಿದರಲ್ಲದೆ ಅತ್ಯುತ್ತಮ ಮಾನವೀಯ ಅಂತಃಕರಣವುಳ್ಳ ಮಹಾನ್ ಮಾನವತವಾದಿಯಾಗಿದ್ದು ಎಂದು ಹೇಳಿದರು.

ಹಿರಿಯ ನಿರ್ಮಾಪಕ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಮಾತನಾಡಿ ಸೂರ್ಯಚಂದ್ರ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಡಾ: ರಾಜ್‍ಕುಮಾರ್ ಅವರ ಹೆಸರು ಅಜರಾಮರ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಯಾವುದೇ ಸಮಸ್ಯೆಗಳಿದ್ದರೂ ನಾವು ಅವರಲ್ಲಿ ತೆರಳಿ ಪರಿಹಾರ ಹುಡುಕಿಕೊಳ್ಳುತ್ತಿದ್ದೇವು ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಹಾಗೂ ಹೆಚ್. ಬಿ. ದಿನೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಚಿತ್ರನಟಿ ಮಾಳವಿಕಾ ಅವಿನಾಶ್, ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ