NEWSಸಿನಿಪಥ

ಜನ-ಮನಗಳಲ್ಲಿ ಚೈತನ್ಯ ತುಂಬಿದ ಡಾ.ರಾಜ್‌ ನೆನಪು

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಾ. ರಾಜಕುಮಾರ್  ಕನ್ನಡದ ಸಾಂಸ್ಕೃತಿಕ ಪ್ರತಿನಿಧಿ, ಈ ಕೋವಿಡ್ ಲಾಕ್‍ಡೌನ್ ಸಮಯದಲ್ಲೂ ಸಹ ಅವರ ಜಯಂತಿ ನೆನಪು ಜನ-ಮನಗಳಲ್ಲಿ ಚೈತನ್ಯವನ್ನು ತುಂಬಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದರು.

ಕೋವಿಡ್ -19 ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಕನ್ನಡದ ವರನಟ ಡಾ: ರಾಜ್‍ಕುಮಾರ್ ಅವರ 92 ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಡಾ.ರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು ಪ್ರತಿಯೊಬ್ಬರಲ್ಲೂ ಒಂದೇ ತೆರನಾಗಿ ಕಾಣುವ ವ್ಯಕ್ತಿತ್ವ  ಡಾ. ರಾಜ್‍ಕುಮಾರ್ ಅವರದ್ದು ಎಂದು ಅವರ ಒಡನಾಟವನ್ನು ಸ್ಮರಿಸಿಕೊಂಡರು.

ಕರ್ನಾಟಕವನ್ನು ಪ್ರತಿನಿಧಿಸುವ ಏಕೈಕ ಕಲಾವಿದರೆಂದರೆ ಅದು ರಾಜ್‍ಕುಮಾರ್ ಮಾತ್ರ, ಅವರ ಪ್ರತಿ ನಡೆ-ನುಡಿ ಇತರರಿಗೆ ಮಾರ್ಗದರ್ಶನವಾಗಿತ್ತು. ಅವರು ಕೇವಲ ಒಬ್ಬ ಕಲಾವಿದರಲ್ಲದೆ ಅತ್ಯುತ್ತಮ ಮಾನವೀಯ ಅಂತಃಕರಣವುಳ್ಳ ಮಹಾನ್ ಮಾನವತವಾದಿಯಾಗಿದ್ದು ಎಂದು ಹೇಳಿದರು.

ಹಿರಿಯ ನಿರ್ಮಾಪಕ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಮಾತನಾಡಿ ಸೂರ್ಯಚಂದ್ರ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಡಾ: ರಾಜ್‍ಕುಮಾರ್ ಅವರ ಹೆಸರು ಅಜರಾಮರ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಯಾವುದೇ ಸಮಸ್ಯೆಗಳಿದ್ದರೂ ನಾವು ಅವರಲ್ಲಿ ತೆರಳಿ ಪರಿಹಾರ ಹುಡುಕಿಕೊಳ್ಳುತ್ತಿದ್ದೇವು ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಹಾಗೂ ಹೆಚ್. ಬಿ. ದಿನೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಚಿತ್ರನಟಿ ಮಾಳವಿಕಾ ಅವಿನಾಶ್, ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ