CrimeNEWSನಮ್ಮಜಿಲ್ಲೆ

ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ಅವರ ಜೀವಕ್ಕೆ ಪೊಲೀಸರ ಕಸ್ಟಡಿಯಲ್ಲಿರುವಾಗಲೇ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಇಂದು ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ತಿಂಗಳುಗಳ ಕಾಲ ದೇವರಾಜೇಗೌಡ ಅವರನ್ನು ಪೊಲೀಸ್‌ ಕಸ್ಟಡಿಯಲ್ಲೇ ಇಡಲು ಸಂಚು ನಡೆದಿದೆ. ಈ ವೇಳೆ ಅವರ ಜೀವಕ್ಕೆ ದೊಡ್ಡ ಅಪಾಯವಿದೆ. ಇದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು.

ಇನ್ನು ಪ್ರಕರಣದ ಖಳನಾಯಕರು, ಸಚಿವರು ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪೆನ್ ಡ್ರೈವ್ ಪ್ರಕರಣದ ಮೂಲ ರೂವಾರಿಗಳಿಗೆ ಸರ್ಕಾರದಿಂದ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನು ಪೆನ್‌ಡ್ರೈ ಬಿಟ್ಟವರಿಗೆ ಇದುವರೆಗೂ ನೋಟಿಸ್ ನೀಡದೆ, ನಿಜವಾದ ಆರೋಪಪಿಗಳನ್ನು ಬಂಧಿಸದೆ ಆಟ ಆಡುತ್ತಿದ್ದಾರೆ. ಇತ್ತ ದೇವರಾಜೇಗೌಡ ಅವರನ್ನು ಷಡ್ಯಂತ್ರ ಮಾಡಿ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಸತ್ಯತೆ ಬೇಕಿಲ್ಲ. ಸಚಿವರ ಹೆಸರು ಹೇಳಿದ್ರೆ ಪರಿಗಣನೆ ಮಾಡಲ್ಲ. ಮೂಲ ಹುಡುಕಿ ತನಿಖೆಯನ್ನೂ ಮಾಡಲ್ಲ ಎಂದು ಆಕ್ರೋಶ ಹೊರಹಾಕಿದರು.

ರಾಜ್ಯ ಸರ್ಕಾರಕ್ಕೆ ದೌರ್ಜನ್ಯಕ್ಕೆ ಒಳಗಾದವರ ಬಗ್ಗೆ ಕಿಂಚಿತ್ತು ಚಿಂತೆ ಇಲ್ಲ ಬದಲಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಮಾತ್ರ ಇರಬೇಕು. ನಾವು ಅಧಿಕಾರದಲ್ಲಿ ಇರಬೇಕು ಎಂಬುದಷ್ಟೆ ಇಂದಿನ ರಾಜಕೀಯವಾಗಿರುವುದು ನಾಡಿನ ಜನತೆಗೆ ದುರಂತವಾಗಿದೆ. ಇದು ಹೀಗೆ ಮುಂದುವರಿದರೆ ಜನ ಸಾಮಾನ್ಯರ ಬದುಕು ಏನಾಗುವುದೋ? ಆ ದೇವರೇ ಕಾಪಾಡಬೇಕು ಎಂದು ಆತಂಕ ವ್ಯಕ್ತಿಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು