NEWSಕೃಷಿನಮ್ಮರಾಜ್ಯ

ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಹೇಳಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ಧಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಹೇಳಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಸರಕಾರ ಇದೆ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು