NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಜೂ.12ರಿಂದ 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ: ಡಾ.ಸಿ.ಎನ್‌.ಮಂಜುನಾಥ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ ಮಾಡುವುದಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸ೦ಸ್ಥೆಯಲ್ಲಿ ಉಚಿತ ಆ೦ಜಿಯೋಪ್ಲಾಸ್ಟಿ ಕಾರ್ಯಾಗಾರ ಆಯೋಜನೆ ಮಾಡಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಯಾನಿಕ್ಸ್‌, ಅಮೆರಿಕ  ಹಾಗೂ ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ಏಷ್ಯನ್ ಚನ್, ಅಮೆರಿಕ ಅವರ ಸಹಯೋಗದೊಂದಿಗೆ 200 ರೋಗಿಗಳಿಗೆ, ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಜೂನ್ 12ರಿಂದ ಜೂನ್ 18ರವರೆಗೆ ಜಯದೇವ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ

ಇನ್ನು ಕಾರ್ಯಾಗಾರವು ಜಯದೇವ ಆಸ್ಪತ್ರೆ, ಬೆಂಗಳೂರು (ಕೇಂದ್ರ ಕಚೇರಿ) ಜೂನ್‌ 12-14ರವರೆಗೆ, ಜಯದೇವ ಆಸ್ಪತ್ರೆ, ಮೈಸೂರು ಶಾಖೆಯಲ್ಲಿ ಜೂನ್‌ 15-16ರವರೆಗೆ ಹಾಗೂ ಜಯದೇವ ಆಸ್ಪತ್ರೆ, ಕಲಬುರಗಿ ಶಾಖೆಯಲ್ಲಿ ಜೂನ್‌ 17-18ರವರೆಗೆ ಆಯೋಜನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಸಂಸ್ಥೆಯ ನಿರ್ದೇಶಕ ಡಾ.ಸಿ.ಎಸ್.ಮಂಜುನಾಥ್‌ ಅವರ ಪ್ರಕಾರ ಈ ಕಾರ್ಯಾಗಾರದಲ್ಲಿ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ. ಅವಶ್ಯಕ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಬಡತನ ರೇಖೆಗಿಂತ ಕೆಳಗಿರುವ ರೋಗಿಗಳು ಮತ್ತು ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಹಾಯಕ ರೋಗಿಗಳು ತಮ್ಮ ಹೆಸರನ್ನು 8ನೇ ಜೂನ್ ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಸಮಯ : ಬೆಳಗ್ಗೆ 10 ಗಂಟೆಯಿಂದ ಸಂಜೆ 4 ವರೆಗೆ, ದಾಖಲಾತಿಗಾಗಿ ಸ೦ಪರ್ಕಿಸಿ ಎಂದು ತಿಳಿಸಿದ್ದಾರೆ.

ಮಾಹಿತಿಗೆ ನಿರ್ದೇಶಕರ ಕಚೇರಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು – 560 069, ಬೆಂಗಳೂರು ಕಚೇರಿ ದೂರವಾಣಿ ಸಂಖ್ಯೆ: 9480827888 ಅಥವಾ 080-26944874, ಮೈಸೂರು ಕಚೇರಿ ದೂರವಾಣಿ ಸಂಖ್ಯೆ : 8660105492 -0821-2263255. ಕಲಬುರಗಿ ಕಚೇರಿ ದೂರವಾಣಿ ಸಂಖ್ಯೆ : 9482114611 08472-230511 ಸಂಪರ್ಕಿಸಿ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು