NEWSನಮ್ಮಜಿಲ್ಲೆನಮ್ಮರಾಜ್ಯ

ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ್ಣ: ರೈತರ ಮಕ್ಕಳಿಗಾಗಿ ಜನವರಿ 19ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರಿಗೆ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ.

ಅನ್ನ, ಅಕ್ಷರ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಉದ್ಯೋಗ ಮೇಳವನ್ನು ಪಿರಿಯಾಪಟ್ಟಣ್ಣದ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ವಿವಿಧ ವಿದ್ಯಾಹರ್ತೆಗೆ ಅವಕಾಶ: ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ವಿವಿಧ ಕೋರ್ಸ್ ಗಳ ಪದವಿ (ಪಾಸ್, ಫೇಲ್), ITI , ಡಿಪ್ಲೋಮ, ಇಂಜಿನಿಯರಿಂಗ್, ಸ್ನಾತಕೋತರ ಪದವಿದಾರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ.

ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ : ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೋಹನ್: 9686564192 ಮತ್ತು ಶಿವ ಕುಮಾರ್: 6363144181 ಸಂಪರ್ಕಿಸ ಬಹುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ