NEWSಉದ್ಯೋಗವಿಜ್ಞಾನ-ತಂತ್ರಜ್ಞಾನ

ಜ.7 ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಸ್ಪರ್ಧೆಗೆ ನೋಂದಾಯಿಸಲು ಕೊನೆಯದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ/ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. 22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ. ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು. ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 18005999918 ಅನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ