NEWSಆರೋಗ್ಯನಮ್ಮರಾಜ್ಯ

ಜು.8ರಂದು 4 ತಿಂಗಳ ವೇತನ ಸೇರಿ ಬೇಡಿಕೆಗಳ ಈಡೇರಿಕೆಗೆ ಆಂಬುಲೆನ್ಸ್ ನೌಕರರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಲ್ಕು ತಿಂಗಳ ವೇತನ, ಮೂರು ವರ್ಷದ ಅರಿಯರ್ಸ್‌ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 8ರಂದು 108 ಆಂಬುಲೆನ್ಸ್ ಚಾಲಕರು, ಸ್ಟಾಫ್‌ನರ್ಸ್ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಅಂದು ಸರ್ಕಾರಿ ಆಂಬುಲೆನ್ಸ್​ಗಳ ಕಾರ್ಯ ಸ್ಥಗಿತವಾಗಲಿದೆ.

ಎಲ್ಲಾದರೂ ಪ್ರತಿಭಟನೆ ನಡೆದರು ತುರ್ತು ಚಿಕಿತ್ಸೆ ನೀಡುವ ಸಲುವಾಗಿ ಹೋಗಿ ನಿಲ್ಲುತ್ತಿದ್ದ ಆಂಬುಲೆನ್ಸ್​ ವ್ಯವಸ್ಥೆಯೇ ಏಕಾಏಕಿ ನಿಂತಲ್ಲಿ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಶುರುವಾಗುವ ಆತಂಕ ಎದುರಾಗಿದೆ. ಹೀಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ 108 ಆಂಬುಲೆನ್ಸ್ ಚಾಲಕರು, ಸ್ಟಾಫ್ ನರ್ಸ್ ಹಾಗೂ ಸಿಬ್ಬಂದಿಗಳು  ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆಗಳು?: ಸರ್ಕಾರ ಕಳೆದ ನಾಲ್ಕು ತಿಂಗಳಿಂದ ವೇತನ ಬಿಡುಗಡೆ ಮಾಡಿಲ್ಲ ಹಾಗೂ ಮೂರು ವರ್ಷದ ಅರಿಯರ್ಸ್ ಬಾಕಿ ಇಟ್ಟುಕೊಂಡಿದೆ ಹೀಗಾಗಿ ಅಂದು ಕರ್ತವ್ಯಕ್ಕೆ ಗೈರಾಗಿ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು 108 ( ಆರೋಗ್ಯ ಕವಚ) ಆಂಬುಲೆನ್ಸ್ ಚಾಲಕರು, ಸ್ಟಾಫ್ ನರ್ಸ್ ಸಿಬ್ಬಂದಿಗಳ ನಿರ್ಧಾರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 2 ಸಾವಿರ ಸ್ಟಾಫ್ ನರ್ಸ್, ಆಂಬುಲೆನ್ಸ್ ಚಾಲಕರಿದ್ದು ಆಂಬುಲೆನ್ಸ್ ಸೇವೆಯನ್ನು ಖಾಸಗಿ ಸಂಸ್ಥೆಯಾದ ಜಿವಿಕೆ ಟೆಂಡರ್ ಮೂಲಕ ನಡೆಸುತ್ತಿದೆ. ಈ ಬಗ್ಗೆ ಮಾತನಾಡಿರುವ ಕೆಲ ಆರೋಗ್ಯ ಇಲಾಖೆಯ ಅಧಿಕಾರಿಗಳು, “ಸರ್ಕಾರ ಅನುದಾನ ನೀಡಿದೆ. ಆದ್ರೆ ಬೇರೆ ಕೆಲಸಕ್ಕೆ ಜಿವಿಕೆ ಸಂಸ್ಥೆ ಬಳಸಿಕೊಂಡಿದೆ” ಎಂದು ಹೇಳುತ್ತಿದ್ದಾರೆ.

ಇನ್ನು ರಾಜ್ಯಾದ್ಯಂತ ಸಾಮೂಹಿಕ ರಜೆ ಹಾಕಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ನೌಕರರು ಮುಂದಾಗಿದ್ದು, ಇನ್ನು 8ದಿನಗಳು ಬಾಕಿ ಇರುವುದರಿಂದ ಅಷ್ಟರೊಳಗೆ ಸರ್ಕಾರ ನೌಕರರ ಸಮಸ್ಯೆ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ