NEWSದೇಶ-ವಿದೇಶವಿದೇಶ

ಟಿವಿ ನಿರೂಪಕನಿಗೆ ಗನ್‌ ಹಿಡಿದು ಬಲವಂತವಾಗಿ ಹೇಳಿಕೆ ಕೊಡಿಸಿದ ತಾಲಿಬಾನ್‌ ಉಗ್ರರು

ವಿಜಯಪಥ ಸಮಗ್ರ ಸುದ್ದಿ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ಗಳ ಅಟ್ಟಹಾಸ ಇನ್ನು ನಿಂತಿಲ್ಲ ಒಂದು ಕಡೆ ನಾವು ಯಾರಿಗೂ ಏನು ಮಾಡುವುದಿಲ್ಲ. ಯಾರು ದೇ ಬಿಟ್ಟು ಹೋಗಬೇಡಿ ಎನ್ನುತ್ತಾರೆ ಮತ್ತೊಂದು ಕಡೆ ಹತ್ಯೆ ಮಾಡಲು ಸಿದ್ಧರಾಗುತ್ತಾರೆ. ಅವರ ಈ​ ನಡೆಯಿಂದ ಜನರಂತು ಹೈರಾಣಾಗಿ ಹೋಗಿದ್ದಾರೆ.

ಹೌದು ತಾಲಿಬಾನಿಗಳ ಆಡಳಿತ ಬಂದಿದ್ದೇಬಂದಿದ್ದು, ಅಲ್ಲಿಂದ ಪರಾರಿಯಾಗಲು ಅನೇಕರು ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ತಾಲಿಬಾನ್​ ಉಗ್ರರು ಜನರಿಗೆ ಭರವಸೆ ನೀಡುತ್ತಿದ್ದಾರೆ, ಯಾರೂ ದೇಶಬಿಟ್ಟು ಹೋಗಬೇಡಿ. ಇಸ್ಲಾಮಿಕ್​ ಆಡಳಿತಕ್ಕೆ ಹೆದರಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಮತ್ತೆಮತ್ತೆ ಭಯಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಇದೀಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಆ ನಿರೂಪಕನ ಸುತ್ತ 6-7 ಉಗ್ರರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು.

‘ತಾಲಿಬಾನಿಗಳಿಗೆ ಹೆದರಬೇಡಿ ಎಂದು ನಿಮ್ಮ ಸುದ್ದಿ ವಾಹಿನಿ ಮೂಲಕ ಹೇಳು..ಇಸ್ಲಾಮಿಕ್ ಆಡಳಿತಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳು, ತಾಲಿಬಾನಿಗಳನ್ನು ಹೊಗಳು’ಎಂದು ನಿರೂಪಕನಿಗೆ ಗನ್​ ತೋರಿಸಿ, ಬಲವಂತವಾಗಿ ಹೇಳಿಸಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಕೆಲವು ಮಾಧ್ಯಮಗಳು ತಾಲಿಬಾನಿಗಳ ಆಡಳಿತ ಶುರುವಾಗುತ್ತಿದ್ದಂತೆ ತಮ್ಮಲ್ಲಿರುವ ಮಹಿಳಾ ಉದ್ಯೋಗಿಗಳನ್ನೆಲ್ಲ ಕೆಲಸದಿಂದ ತೆಗೆದುಹಾಕಿದ್ದಾರೆ.

ಕೆಲವೇ ದಿನಗಳ ಹಿಂದೆ, ಕಾಬೂಲ್​​ನಲ್ಲಿ ವರದಿ ಮಾಡುತ್ತಿದ್ದ ಟೋಲೋ ನ್ಯೂಸ್​ ವರದಿಗಾರ ಮತ್ತು ಕ್ಯಾಮರಾಮನ್​​ಗೆ ಉಗ್ರರು ಥಳಿಸಿದ್ದರು. ಕಾಬೂಲ್​ನ್ನು ವಶಪಡಿಸಿಕೊಂಡಾಗಿನಿಂದಲೂ ಅಲ್ಲಿನ ಪತ್ರಕರ್ತರ ಮನೆಗಳನ್ನು ತಾಲಿಬಾನಿಗಳು ಹುಡುಕುತ್ತಿದ್ದಾರೆ. DW ಎಂಬ ನ್ಯೂಸ್​ ಚಾನಲ್​ನಲ್ಲಿ ಕೆಲಸ ಮಾಡುತ್ತಿದ್ದ ವರದಿಗಾರನೊಬ್ಬನನ್ನು ಹತ್ಯೆ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ