NEWSಕ್ರೀಡೆದೇಶ-ವಿದೇಶ

ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದ ಉಮ್ರಾನ್ ಮಲಿಕ್

ವಿಜಯಪಥ ಸಮಗ್ರ ಸುದ್ದಿ

ಗುವಾಹಟಿ: ಜಮ್ಮು-ಕಾಶ್ಮೀರ ಮೂಲದ ಬೌಲರ್ ಉಮ್ರಾನ್ ಮಲಿಕ್ ತನ್ನ ವೇಗದ ಬೌಲಿಂಗ್ ಮೂಲಕ ಐಪಿಎಲ್‍ನಲ್ಲಿ (IPL) ಮಿಂಚಿ ಬಳಿಕ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಆಟಗಾರ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಗಂಟೆಗೆ 156ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.

ಟೀಂ ಇಂಡಿಯಾ ವೇಗಿ ಎಂದೆ ಕರೆಸಿಕೊಳ್ಳುವ ಉಮ್ರಾನ್ ಮಲಿಕ್ ಮಂಗಳವಾರ ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲೇ ಗಂಟೆಗೆ 156 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ಮೂಲಕ ಭಾರತ ವೇಗದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ 14ನೇ ಓವರ್ ಎಸೆಯಲು ಬಂದ ಉಮ್ರಾನ್ ಮಲಿಕ್ ತನ್ನ ಸರದಿಯ ಎರಡನೇ ಓವರ್‌ನಲ್ಲಿ 156 ಕಿ.ಮೀ ವೇಗದ ಎಸೆತ ದಾಖಲಿಸಿದ್ದಾರೆ.

ಈ ಹಿಂದೆ ಗಂಟೆಗೆ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದ ಜಸ್ಪ್ರೀತ್ ಬುಮ್ರಾ ಭಾರತದ ವೇಗದ ಬೌಲರ್ ಎಂಬ ದಾಖಲೆಯನ್ನು ಮಾಡಿದ್ದರು. ಇದೀಗ ಉಮ್ರಾನ್ ಮಲಿಕ್ ಆ ದಾಖಲೆಯನ್ನು ಪುಡಿಗಟ್ಟಿ ತಮ್ಮ ಹೆಸರಿನ ಹಿಂದೆ ನೂತನ ದಾಖಲೆ ಬರೆದು ಕ್ರಿಕೆಟ್‌ ಪ್ರೇಮೆಗಳ ಮನದಲ್ಲಿ ಹಚ್ಚಳಿಯದೆ ಉಳಿದಿದ್ದಾರೆ.

ಟೀಂ ಇಂಡಿಯಾ ವೇಗಿಗಳ ಪೈಕಿ ಮೊಹಮ್ಮದ್ ಶಮಿ ಅತಿ ವೇಗದ ಬೌಲಿಂಗ್‍ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶಮಿ ಗಂಟೆಗೆ 153.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ನವದೀಪ್ ಸೈನಿ ಗಂಟೆಗೆ 152.85 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ವೇಗದ ಬೌಲರ್‌ಗಳ ದಾಖಲೆಯ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧ ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭಮನ್ ಗಿಲ್ ಮಿಂಚಿದರೆ, ಬೌಲಿಂಗ್‍ನಲ್ಲಿ ಉಮ್ರಾನ್ ಮಲಿಕ್, ಸಿರಾಜ್ ಭರ್ಜರಿ ಆಟ ಪ್ರದರ್ಶಿಸಿದರು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಪಂದ್ಯದಲ್ಲಿ ವೇಗದ ಎಸೆತದ ದಾಖಲೆಯೊಂದಿಗೆ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದು ಭಾರತದ 67 ರನ್‍ಗಳ ದೊಡ್ಡ ಮೊತ್ತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು