NEWSನಮ್ಮಜಿಲ್ಲೆನಮ್ಮರಾಜ್ಯ

ಡಿಪೋಗಳಲ್ಲಿ ನೌಕರರ ಸಮಸ್ಯೆ ಆಲಿಸಲು ಅನುಮತಿ ಕೋರಿ ಹೈ ಕೋರ್ಟ್‌ಗೆ ಅರ್ಜಿ : ವಕೀಲ ಶಿವರಾಜು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಘಟಕ ಮಟ್ಟದಲ್ಲಿ ಅನುಭವಿಸುತ್ತಿರುವ ಕಷ್ಟ- ಸುಖಗಳ ಬಗ್ಗೆ ವಿಚಾರಿಸಲು ಕಾನೂನಾತ್ಮಕವಾಗಿಯೇ ಡಿಪೋಗಳಿಗೆ ಭೇಟಿ ನೀಡಿದ ವೇಳೆ ಅಧಿಕಾರಿಗಳು ತಡೆಯದಂತೆ ಕೋರಿ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಕರಾರಸಾಸಂ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಕಾನೂನು ಸಲಹೆಗಾರರೂ ಆದ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದ್ದಾರೆ.

10ಜನರನ್ನೊಳಗೊಂಡ ವಕೀಲರ ತಂಡ ನೌಕರರ ಸಮಸ್ಯೆ ಆಲಿಸಲು ಡಿಪೋಗಳಿಗೆ ಭೇಟಿ ನೀಡಲಿದೆ ಎಂದ ಅವರು, ನಾವು ಹೋದಾಗ ಡಿಪೋಗಳಲ್ಲಿನ ಭದ್ರತಾ ಸಿಬ್ಬಂದಿ ನಮಗೆ ಮೇಲಧಿಕಾರಿಗಳಿಂದ ಯಾವುದೆ ಮಾಹಿತಿ ಇಲ್ಲ, ಹೀಗಾಗಿ ನಾವು ನಿಮಗೆ ಡಿಪೋ ಪ್ರವೇಶ ಮಾಡುವುದಕ್ಕೆ ಅವಕಾಶ ಕೊಡಲು ಬರುದಿಲ್ಲ ಎಂದು ಹೇಳುತ್ತಾರೆ.

ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು.

ಇನ್ನು ಈ ಬಗ್ಗೆ ಡಿಪೋ ವ್ಯವಸ್ಥಾಪಕರು ಸರಿಯಾಗಿ ಸ್ಪಂದಿಸುವುದಿಲ್ಲ ಆದ್ದರಿಂದ ನೌಕರರ ಸಮಸ್ಯೆಗಳು ಸಮಸ್ಯೆಗಳಾಗಿಯೇ ಇನ್ನೂ ಉಳಿದಿದ್ದು ನಿತ್ಯ ಹತ್ತಾರು ಮಂದಿ ನಮ್ಮ ಕಚೇರಿಗೆ ಸಮಸ್ಯೆಗಳನ್ನು ಹೊತ್ತು ತರುತ್ತಿದ್ದಾರೆ.

ನಾವು ನೌಕರರ ಹಿತ ದೃಷ್ಟಿಯಿಂದ ಕರಾರಸಾಸಂ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ಸ್ಥಾಪಿಸಿದ್ದು ಅವರ ತೊಂದರೆ ಆಲಿಸಲು ಆಗುತ್ತಿಲ್ಲ ಎಂದರೆ ಸಂಘದ ಪದಾಧಿಕಾರಿಗಳಿಗೂ ಮುಜುಗರವಾಗುತ್ತದೆ. ಅಲ್ಲದೆ ನೌಕರರು ಕೂಡ ಹಲವಾರು ಸಮಸ್ಯೆಗೆ ಸಿಲುಕಿ ಮಾನಸಿಕವಾಗಿ ಖಿನ್ನತೆಗೆ ಜಾರುತ್ತಿದ್ದಾರೆ.

ಈ ರೀತಿ ಖಿನ್ನತೆಗೆ ಒಳಗಾಗಿ ಈಗಾಗಲೇ ಹಲವರು ಜೀವನ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಈ ರೀತಿಯ ಘಟನೆಗಳು ಮರು ಕಳುಹಿಸಬಾರದು ಎಂಬ ದೃಷ್ಟಿಯಿಂದ. ಮುಂದಿನ ವಾರದೊಳಗೆ ಹೈ ಕೋರ್ಟ್‌ನಲ್ಲೇ ಈ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಕೋರಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು