CrimeNEWSಬೆಂಗಳೂರುಸಿನಿಪಥ

ಡ್ರಗ್ ಪೆಡ್ಲರ್ ಜೊತೆ ಪತ್ನಿ ಅನೈತಿಕ ಸಂಬಂಧ: ಪೊಲೀಸ್‌ ಠಾಣೆ ಮೆಟ್ಟಿಲೇರಿದ ನಿರ್ಮಾಪಕ ಚಂದ್ರಶೇಖರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಟಿ.ಚಂದ್ರಶೇಖರ್ ತನ್ನ ಹೆಂಡತಿಯ ವಿರುದ್ಧವೇ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ನಿ ಡ್ರಗ್ ವ್ಯಸನಿಯಾಗಿದ್ದು, ಡ್ರಗ್ಸ್ ಗಾಗಿಯೇ ಆಕೆ ಡ್ರಗ್ ಪೆಡ್ಲರ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನಲ್ಲಿ ನಮಿತಾ ಅವರನ್ನು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಅಂದಿನಿಂದಲೂ ಆಕೆಯೊಂದಿಗೆ ಸವಾಗಿದ್ದೇನೆ. ನಮಗೆ ಇನ್ನೂ ಮಕ್ಕಳು ಇಲ್ಲ. ನನ್ನ ಹೆಂಡತಿ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ವ್ಯಸನಿಯಾಗಿದ್ದಾಳೆ. ಅದನ್ನು ಬಿಡಿಸಲು ಬಹಳ ಸಾರಿ ಪ್ರಯತ್ನ ಪಟ್ಟಿದ್ದೇನೆ. ಆದರೂ ಕದ್ದು ಮುಚ್ಚಿ ಆಕೆ ಸೇವನೆ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಮುಂದುವರಿದು, ‘ಇತ್ತೀಚೆಗೆ ಜನವರಿಯಿಂದ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ ಪೆಡ್ಲರ್ ನೊಂದಿಗೆ ಸಲುಗೆ ಬೆಳೆಸಿಕೊಂಡು ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ. ಅದಕ್ಕೆ ಸಂಬಂಧಪಟ್ಟಂತೆ ಸಾಕ್ಷಿಗಳು ನನಗೆ ಸಿಕಿದ್ದು, ನಾನು ನನ್ನ ಹೆಂಡತಿಗೆ ಬುದ್ದಿ ಹೇಳಿದ್ದೇನೆ. ಆದರೂ ನನ್ನ ಮಾತನ್ನು ಆಕೆ ತಿರಸ್ಕಾರ ಮಾಡಿ, ಅವನೊಂದಿಗೆ ಕದ್ದು ಮುಚ್ಚಿ ಸಂಬಂಧ ಇಟ್ಟುಕೊಂಡಿದ್ದಾಳೆ.

ಇನ್ನು ಅವನು ಮಾದಕ ವಸ್ತಗಳನ್ನು ಕೊಡುತ್ತಿರುತ್ತಾನೆ. ಈ ನಡುವೆ ಹೆಂಡತಿ ಮತ್ತು ಅವಳ ಪ್ರಿಯಕರ ಈ ವಿಚಾರವಾಗಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಚಂದ್ರಶೇಖರ್, ಜೂನ್ 16ರಂದು 12.30ರಲ್ಲಿ ನಾನು ಇಲ್ಲದ ಸಮಯದಲ್ಲಿ ಲಕ್ಷ್ಮೀಶ್ ಪ್ರಭುವನ್ನು ಮನೆಗೆ ಕರೆಯಿಸಿಕೊಂಡು ಅವನೊಂದಿಗೆ ದೈಹಿಕ ಸಂಪರ್ಕದಲ್ಲಿದ್ದಾಗ ನಾನು ಪ್ರತ್ಯಕ್ಷವಾಗಿ ನೋಡಿ ನನ್ನ ಹೆಂಡತಿಯನ್ನು ಕೇಳಿದಾಗ ನನ್ನ ಹೆಂಡತಿ ಹಾಗೂ ಅವಳ ಪ್ರಿಯಕರ ನನ್ನ ಕೈ ಕಾಲು ಹಿಡಿದುಕೊಂಡು ರಕ್ತ ಬರುವಂತೆ ಹೊಡೆದಿದ್ದರು.

ನನ್ನ ಹೆಂಡತಿ ನನ್ನನ್ನು ಹಿಡಿದುಕೊಂಡು ಅವಳ ಪ್ರಿಯಕರ ನನ್ನ ಮೇಲೆ ಚಾಕುವಿನಿಂದ ಹಲ್ಲೇ ಮಾಡಿದ್ದ ಎಂದು ದೂರಿನಲ್ಲಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ.

ಇತ್ತ ಪತಿಯ ಮೇಲೆ ಮರು ದೂರು ನೀಡಿರುವ ಪತ್ನಿ, ಮನೆಯಲ್ಲಿ ಡ್ರಗ್ ಇಟ್ಟು ಅರೆಸ್ಟ್ ಮಾಡಿಸ್ತಿನಿ ಎಂದು ಚಂದ್ರಶೇಖರ್ ಬೆದರಿಕೆ ಹಾಕಿದ್ದಾನೆ. ಅಷ್ಟಲ್ಲದೆ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ಥಳಿಸಿದ್ದಲ್ಲದೆ ಚಾಕುವಿನಿಂದ ತನ್ನ ಮೇಲೆ ಕೂಡ ಹಲ್ಲೆ ನಡೆಸಿರೋದಾಗಿ ಪತ್ನಿ ನಮಿತಾ ಪ್ರತಿದೂರು ನೀಡಿದ್ದಾರೆ.

ಸದ್ಯ ಈ ಸಂಬಂಧ ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಅನಿಸಿದರೂ, ಹೆಂಡತಿಯ ವಿರುದ್ಧ ಚಂದ್ರಶೇಖರ್ ಗುರುತರ ಆರೋಪ ಮಾಡಿದ್ದಾರೆ.

ಚಂದ್ರಶೇಖರ್ ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಎಂಬ ಎರಡು ಚಿತ್ರಗಳ ನಿರ್ಮಾಪಕರಾಗಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ